ಕರ್ನಾಟಕ

karnataka

By

Published : Nov 24, 2019, 4:51 PM IST

ETV Bharat / state

ನ.25ಕ್ಕೆ ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಪ್ರತಿಭಟನೆ..

ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದಿಂದ ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಡಿ.ಬಸವರಾಜ್ ತಿಳಿಸಿದರು.

ಡಿ.ಬಸವರಾಜ್ ಸುದ್ದಿಗೋಷ್ಟಿ

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದಿಂದ ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಡಿ.ಬಸವರಾಜ್ ತಿಳಿಸಿದರು.

ಕಾಂಗ್ರೆಸ್‌ ಮುಖಂಡ ಡಿ.ಬಸವರಾಜ್ ..
ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿಯವರು ಬಂದ ಬಳಿಕ ಕಾರ್ಮಿಕ ನೀತಿ ಬದಲಾಗುತ್ತಿದೆ. ಕಾರ್ಮಿಕ‌ ಕಾಯ್ದೆ ತಿದ್ದುಪಡಿ ತಂದು ಕಾರ್ಮಿಕರಿಗೆ ತೊಂದರೆ ಕೊಡಲಾಗುತ್ತಿದೆ. ಕಾರ್ಮಿರಿಗೆ ಮರಣ ಶಾಸನ‌ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇದೇ ತಿಂಗಳ 25 ರಂದು ಬೆಳಗ್ಗೆ 11ಕ್ಕೆ ಅಸಂಘಟಿತ ಕಾರ್ಮಿಕ ವಿಭಾಗದಿಂದ ವಿಭಾಗದ ಅಧ್ಯಕ್ಷ ನಂಜಾನಾಯ್ಕ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶಾಸಕರು, ಮಾಜಿ ಶಾಸಕರು, ಬ್ಲಾಕ್ ಕಾಂಗ್ರೆಸ್, ಅಸಂಘಟಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದು ಪ್ರತಿಭಟನೆಯೊಳಗೆ ಭಾಗವಹಿಸಲು ಮನವಿ‌ ಮಾಡಿದರು.

For All Latest Updates

ABOUT THE AUTHOR

...view details