ಕರ್ನಾಟಕ

karnataka

ETV Bharat / state

ಏಷ್ಯಾದ ಎರಡನೇ ಅತಿದೊಡ್ಡ ಸೂಳೆಕೆರೆಗೆ ಬಾಗಿನ ಅರ್ಪಣೆ - ಸೂಳೆಕೆರೆಗೆ ಬಾಗಿನ ಅರ್ಪಿಸಿದ ಸಂಸದ ಜಿ ಎಂ ಸಿದ್ದೇಶ್ವರ್

ಕಳೆದ 6 ವರ್ಷಗಳಿಂದ ಬರಡಾಗಿದ್ದ ಸೂಳೆಕೆರೆ ಒಡಲು ತುಂಬಿ ತುಳುಕುತ್ತಿದ್ದು, ಸಂಸದ ಜಿಎಂ ಸಿದ್ದೇಶ್ವರ್, ಶಾಸಕ ಮಾಡಾಳು ವಿರುಪಾಕ್ಷಪ್ಪ, ಪ್ರೋ. ಲಿಂಗಪ್ಪ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕೆರೆಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸುವ ಭರವಸೆ ನೀಡಿದರು.

ಏಷ್ಯಾದ ಎರಡನೇ ಅತಿದೊಡ್ಡ ಕೆರೆಗೆ ಬಾಗಿನ ಅರ್ಪಣೆ

By

Published : Nov 19, 2019, 8:05 AM IST

ದಾವಣಗೆರೆ:ಸೂಳೆಕೆರೆ ಕಳೆದ 6 ವರ್ಷಗಳಿಂದ ಭರ್ತಿಯಾಗಿರಲಿಲ್ಲ. ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಕೆರೆಗೆ ಜೀವಕಳೆ ಬಂದಿದೆ. ಈ ಹಿನ್ನಲೆ ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಮಾಡಾಳು ವಿರುಪಾಕ್ಷಪ್ಪ, ಪ್ರೋ. ಲಿಂಗಪ್ಪ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕೆರೆಗೆ ಬಾಗಿನ ಅರ್ಪಿಸಿದರು.

ಸಕಾಲಕ್ಕೆ ಮಳೆಯಾಗದ ಕಾರಣ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಮಾತ್ರವಿತ್ತು. ಈ ಬಾರಿ ಉತ್ತಮ ಮಳೆಯಾದ ಕಾರಣ ಕೆರೆ ಭರ್ತಿಯಾಗಿದೆ. ಮೈದುಂಬಿ ಹರಿಯುತ್ತಿರುವ ಕೆರೆ ನೋಡುಗರ ಆಕರ್ಷಣೆ ಕೇಂದ್ರವಾಗಿದೆ. ಸುಮಾರು 6 ಎಕೆರೆ ಪ್ರದೇಶದಲ್ಲಿರುವ ಕೆರೆ ಭರ್ತಿಯಾಗಿರುವುದು ಈ ಭಾಗದ ಜನರಿಗೆ ಖುಷಿ ತಂದಿದೆ. ಈ ಹಿನ್ನೆಲೆ ಕೆರೆಗೆ ಬಾಗಿನ ಅರ್ಪಿಸಿದ ಸಂಸದ ಸಿದ್ದೇಶ್ವರ್ ಗಂಗಾಮಾತೆಗೆ ಪೂಜೆ ಸಲ್ಲಿಸಿದರು.

ಸೂಳೆಕೆರೆ ಕೆರೆಗೆ ಬಾಗಿನ ಅರ್ಪಿಸಿದ ಸಂಸದ ಸಿದ್ದೇಶ್ವರ್​

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೂಳೆಕೆರೆ ತುಂಬಿ ಸಮುದ್ರದಂತೆ ಕಾಣುತ್ತಿದೆ. ಸೂಳೆಕೆರೆಯನ್ನು ಹೆಚ್ಚು ಅಭಿವೃದ್ಧಿ ಪಡಿಸಲು ಡಿಪಿಆರ್ ತಯಾರಿಸಿ 56 ಕೋಟಿ ರೂಪಾಯಿ ಹಣ ಮಂಜುರಾತಿಗೆ ಕೇಳಿದ್ದೇವೆ. ಸೂಳೆಕೆರೆಯನ್ನು ಪ್ರವಾಸಿ ತಾಣ ಮಾಡುತ್ತೇವೆ ಎಂದು ಭರವಸೆ ನೀಡಿದರು.

For All Latest Updates

TAGGED:

ABOUT THE AUTHOR

...view details