ದಾವಣಗೆರೆ: ಸಮರ್ಪಕ ವಿದ್ಯುತ್ ಪೂರೈಸದ ಬೆಸ್ಕಾಂ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರಕೆರೆಯಲ್ಲಿ ನಡೆದಿದ್ದು, ಅಧಿಕಾರಿಗಳ ಜೊತೆ ರೈತರು ಮಾತಿನ ಚಕಮಕಿ ನಡೆಸಿದ್ದಾರೆ.
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಅಧಿಕಾರಿಗಳ ಜೊತೆ ಅನ್ನದಾತರ ವಾಗ್ವಾದ - davanagere latest news
ಕೃಷಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲವೆಂದು ಬೆಸ್ಕಾಂ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರಕೆರೆಯಲ್ಲಿ ನಡೆದಿದೆ.
![ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಅಧಿಕಾರಿಗಳ ಜೊತೆ ಅನ್ನದಾತರ ವಾಗ್ವಾದ Demand for adequate power supply](https://etvbharatimages.akamaized.net/etvbharat/prod-images/768-512-6464714--thumbnail-3x2-aaa.jpg)
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಅಧಿಕಾರಿಗಳ ಜೊತೆ ಅನ್ನದಾತರ ವಾಗ್ವಾದ
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಅಧಿಕಾರಿಗಳ ಜೊತೆ ಅನ್ನದಾತರ ವಾಗ್ವಾದ
ಕೃಷಿಗೆ ರಾತ್ರಿ ವೇಳೆ ಸರಿಯಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ರಾತ್ರಿ ವೇಳೆ ಕನಿಷ್ಠ 7 ಗಂಟೆಗಳ ಕಾಲ ಥ್ರೀ ಫೇಸ್ ವಿದ್ಯುತ್ ನೀಡಬೇಕು. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಬೆಸ್ಕಾಂ ಕಚೇರಿಗೆ ಅಲೆದು-ಅಲೆದು ಸಾಕಾಗಿದೆಯೆಂದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಧಿಕ್ಕಾರ ಕೂಗಿದರು.
ಬೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅನ್ನದಾತರು ಇಂಥಹ ಧೋರಣೆ ಮುಂದುವರಿಸಿದರೆ ಸುಮ್ಮನಿರುವುದಿಲ್ಲ. ಸರಿಯಾಗಿ ವಿದ್ಯುತ್ ಪೂರೈಕೆ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.