ದಾವಣಗೆರೆ: ನಗರದ ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿಯ ಮ್ಯಾನೇಜರ್ ಮತ್ತು ಸಿಬ್ಬಂದಿ ಜಗಳ ಈಗ ಬೀದಿಗೆ ಬಿದ್ದಿದೆ. ದಿನಗೂಲಿ ನೌಕರಿ ಮಾಡುತ್ತಿರುವ ಮಹಿಳೆಗೆ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಈಗ ಮ್ಯಾನೇಜರ್ ಸಹ ಪೊಲೀಸರಿಗೆ ದೂರು ನೀಡಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಇದೇ ಕಚೇರಿಯಲ್ಲಿ ಸವಿತಾ ಎಂಬ ಮಹಿಳೆ ದಿನಗೂಲಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ನಿಗಮದ ವ್ಯವಸ್ಥಾಪಕ ರೇವಣ್ಣ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಂಘಟನೆಗಳು ಹಾಗೂ ಮಾಧ್ಯಮದವರ ಸಮ್ಮುಖದಲ್ಲಿ ರಂಪಾಟ ಮಾಡಿದ್ದರು. ಈ ವೇಳೆ ಕಚೇರಿಯಲ್ಲಿ ಕಣ್ಣೀರು ಹಾಕಿದರಲ್ಲದೇ,ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು. ಆದರೆ, ಇದಕ್ಕೆ ಸಂಬಂಧಿಸಿದಂತೆ ನಿಗಮದ ಸಿಬ್ಬಂದಿ ಸವಿತಾ ತಮ್ಮ ಮೇಲೆ ವಿನಾ ಕಾರಣ ಆರೋಪ ಮಾಡಿದ್ದಾರೆ. ಈ ಆರೋಪ ಮಾಡುವ ಕುರಿತಂತೆ ಸತ್ಯಾಸತ್ಯತೆ ಪರಿಶೀಲಿಸುವಂತೆ ಪೊಲೀಸ್ ಠಾಣೆಗೆ ಸವಿತಾ ವಿರುದ್ಧ ಮ್ಯಾನೇಜರ್ ದೂರು ನೀಡಿದ್ದಾರೆ. ಈ ದೂರಿನಲ್ಲಿ ಮಹಿಳೆ ತಮ್ಮ ಮೇಲೆ ಕೂಗಾಡಿ ರಂಪಾಟ ನಡೆಸಿದ್ದು, ಯಾಕೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.