ಕರ್ನಾಟಕ

karnataka

By

Published : Dec 16, 2020, 12:18 PM IST

ETV Bharat / state

ಚುನಾವಣೆ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ.. ಡಿಸಿ-ಎಸ್ಪಿ‌ ಮನವೊಲಿಕೆ ಯತ್ನ ವಿಫಲ

ಮನವೊಲಿಕೆ ಸಭೆಯಲ್ಲಿ 100ಕ್ಕೂ ಹೆಚ್ಚು ಗ್ರಾಮಸ್ಥರು ಭಾಗಿಯಾಗಿದ್ದರು. ಪ್ರತ್ಯೇಕ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರು ಪಟ್ಟು ಹಿಡಿದರು. ನಮ್ಮ ನಿರ್ಧಾರ ಬದಲಿಸುವುದಿಲ್ಲ ಎಂದು ಗ್ರಾಮಸ್ಥರು ಸ್ಪಷ್ಟಪಡಿಸಿದರು..

election boycott
ಚುನಾವಣೆ ಬಹಿಷ್ಕಾರ

ದಾವಣಗೆರೆ :ಜಿಲ್ಲೆಯ ನ್ಯಾಮತಿ ತಾಲೂಕಿನ ಜೀನಹಳ್ಳಿಯ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿಯೋದಿಲ್ಲ ಅಂತಾ ಜಿಲ್ಲಾಡಳಿತಕ್ಕೆ ಸ್ಪಷ್ಟಪಡಿಸಿದ್ದಾರೆ. ಬಸವೇಶ್ವರ ದೇವಸ್ಥಾನದಲ್ಲಿ ಜಿಲ್ಲಾಧಿಕಾರಿ ನೇತೃತ್ವದ ತಂಡ ಗ್ರಾಮಸ್ಥರನ್ನ ಮನವೊಲಿಸುವ ಯತ್ನವೂ ವಿಫಲವಾಗಿದೆ.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್ಪಿ ಹನುಮಂತರಾಯ ನೇತೃತ್ವದ ತಂಡ ಮನವೊಲಿಕೆ ಮಾಡಲು ಪ್ರಯತ್ನಿಸಿದ್ರೂ ಕೂಡ ಆ ಯತ್ನ ವಿಫಲ ಆಗಿದೆ. ಜೀನಹಳ್ಳಿಗೆ ಗ್ರಾಮ ಪಂಚಾಯತ್‌ ಮಾನ್ಯತೆ ನೀಡಲು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಗ್ರಾಪಂ ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರು ಮುಂದಾಗಿದ್ದಾರೆ.

ಜಿಲ್ಲಾಧಿಕಾರಿಗಳ ನೇತೃತ್ವದ ತಂಡದಿಂದಾದ ಮನವೊಲಿಕೆ ಯತ್ನ ವಿಫಲ

ಮನವೊಲಿಕೆಯ ಸಭೆಯಲ್ಲಿ 100ಕ್ಕೂ ಹೆಚ್ಚು ಗ್ರಾಮಸ್ಥರು ಭಾಗಿಯಾಗಿದ್ದರು. ಪ್ರತ್ಯೇಕ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರು ಪಟ್ಟು ಹಿಡಿದರು. ನಮ್ಮ ನಿರ್ಧಾರ ಬದಲಿಸುವುದಿಲ್ಲ ಎಂದು ಗ್ರಾಮಸ್ಥರು ಸ್ಪಷ್ಟಪಡಿಸಿದ ಬೆನ್ನಲ್ಲೇ, ಜಿಲ್ಲಾಧಿಕಾರಿಗಳು ನೇತೃತ್ವದ ತಂಡದ ಮನವೊಲಿಕೆ ಯತ್ನ ವಿಫಲವಾಗಿದೆ.

ಓದಿ...ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕಾರ.. ಯಾರೂ ನಾಮಪತ್ರ ಸಲ್ಲಿಸದಂತೆ ಕಾವಲು..

ABOUT THE AUTHOR

...view details