ಕರ್ನಾಟಕ

karnataka

ದಾವಣಗೆರೆಯಲ್ಲಿ ಸಿಡಿಲು ಬಡಿದು ರೈತ ಸಾವು

ತೋಟ ನೋಡಲು ಹೋದ ರೈತನಿಗೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

By

Published : Oct 21, 2019, 8:18 PM IST

Published : Oct 21, 2019, 8:18 PM IST

ಸಿಡಿಲು ಬಡಿದು ರೈತ ಸಾವು

ದಾವಣಗೆರೆ:ಬೆಣ್ಣೆ ನಗರಿಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿಸಿಡಿಲು ಬಡಿದ ಪರಿಣಾಮ ರೈತನೋರ್ವ ಮೃತಪಟ್ಟಿರುವ ಘಟನೆ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ನಡೆದಿದೆ.

ಜಯಪ್ಪ ಸಾವನ್ನಪ್ಪಿದ ರೈತ. ತನ್ನ ಜಮೀನಿನಲ್ಲಿ ಎಲೆಬಳ್ಳಿ ತೋಟ ನೋಡಲು ಹೋದ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಬೆಳ್ಳೂಡಿ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸಂಬಂಧಿಕರು ತೋಟಕ್ಕೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ABOUT THE AUTHOR

...view details