ಕರ್ನಾಟಕ

karnataka

ETV Bharat / state

ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ... ಕುಟುಂಬಕ್ಕೆ ಶಾಸಕ ರೇಣುಕಾಚಾರ್ಯ ಸಾಂತ್ವನ - undefined

ಸರಿಯಾಗಿ ಮಳೆಯಾಗದೇ ಬೆಳೆ ಕೈಕೊಟ್ಟ ಹಿನ್ನೆಲೆ ಸಾಲಬಾಧೆಯಿಂದ ಮನನೊಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ರೈತನ ಮನೆಗೆ ಶಾಸಕ ಎಂ ಪಿ ರೇಣುಕಾಚಾರ್ಯ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ‌‌‌.

ರೈತ ಆತ್ಮಹತ್ಯೆ

By

Published : Jun 3, 2019, 3:23 AM IST

ದಾವಣಗೆರೆ:ಸಾಲಬಾಧೆಯಿಂದ ಕಂಗಾಲಾಗಿದ್ದ ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೆಚ್.ಗೋಪಗೊಂಡನಹಳ್ಳಿಯಲ್ಲಿ ನಡೆದಿದೆ.

ರೈತ ಆತ್ಮಹತ್ಯೆ, ಕುಟುಂಬಸ್ಥರಿಗೆ ಶಾಸಕ ರೇಣುಕಾಚಾರ್ಯ ಸಾಂತ್ವನ

ಹಾಲೇಶಪ್ಪ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ. ಹಾಲೇಶಪ್ಪರಿಗೆ ಎರಡೂವರೆ ಎಕರೆ ಜಮೀನಿದ್ದು, ಕೈಗಡವಾಗಿ ಐದು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸರಿಯಾಗಿ ಮಳೆಯಾಗದೇ ಬೆಳೆ ಕೈಕೊಟ್ಟ ಹಿನ್ನೆಲೆ ನೇಣಿಗೆ ಶರಣಾಗಿದ್ದಾನೆ.

ಮೃತ ಹಾಲೇಶಪ್ಪನಿಗೆ ಐದು ಜನ ಮಕ್ಕಳಿದ್ದು, ತಂದೆಯ ಅಗಲಿಕೆಯಿಂದ ದಿಕ್ಕು ತೋಚದಂತಾಗಿದ್ದಾರೆ. ಸ್ಥಳಕ್ಕೆ ಶಾಸಕ ಎಂ ಪಿ ರೇಣುಕಾಚಾರ್ಯ ಭೇಟಿ ನೀಡಿ, ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದರು.

For All Latest Updates

TAGGED:

ABOUT THE AUTHOR

...view details