ದಾವಣಗೆರೆ: ಕೋವಿಡ್-19 ಹಿನ್ನೆಲೆಯಲ್ಲಿ ಫ್ರಂಟ್ಲೈನ್ ವರ್ಕರ್ಗಳಾದ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಪೊಲೀಸರು ಸೇರಿದಂತೆ ಕೊರೊನಾ ವಾರಿಯರ್ಸ್ ತಮಗೆಲ್ಲಿ ಕೊರೊನಾ ಸೋಂಕು ತಗಲುವುದೆಂಬ ಭಯ ಪಡುವ ಅವಶ್ಯಕತೆ ಇಲ್ಲ. ಗಂಭೀರ ಆರೋಗ್ಯ ಸಮಸ್ಯೆವುಳ್ಳ ಕೊರೊನಾ ಸೋಂಕಿತರನ್ನು ಗುಣಪಡಿಸಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಆದ್ದರಿಂದ ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹೇಳಿದರು.
ಕೆಲ ಕೊರೊನಾ ವಾರಿಯರ್ಸ್ಗಳು ಕೊರೊನಾ ಬರುತ್ತೆ ಎಂದು ಭಯಭೀತರಾಗಿದ್ದಾರೆ ಎಂಬ ಮಾಹಿತಿ ಬಂದಿದೆ. ಯಾರೂ ಅಧೀರರಾಗಬೇಡಿ. ಎರಡೂವರೆ ತಿಂಗಳ ಮಗುವಿನಿಂದ ಹಿಡಿದು 70 ವರ್ಷದ ವೃದ್ಧರೂ ಗುಣಮುಖರಾಗಿದ್ದಾರೆ. ಕೊರೊನಾ ಬಗ್ಗೆ ಭಯ ಬೀಳಬೇಡಿ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಅಭಯ ನೀಡಿದರು.