ಕರ್ನಾಟಕ

karnataka

By

Published : Apr 5, 2021, 6:46 AM IST

Updated : Apr 5, 2021, 7:07 AM IST

ETV Bharat / state

ಮೀಸಲಾತಿ ಹೆಚ್ಚಿಸಿದಾಗ ಎಲ್ಲಾ ಸಮುದಾಯಗಳಿಗೆ ನ್ಯಾಯ ಸಿಗುತ್ತದೆ: ಬೊಮ್ಮಾಯಿ

ಮೀಸಲಾತಿ ಮಿತಿ ಹೆಚ್ಚು ಮಾಡಿದಾಗ ಮಾತ್ರ ಪ್ರತಿಯೊಂದು ಸಮಾಜಕ್ಕೆ ನ್ಯಾಯ ಸಿಗುತ್ತದೆ ಎಂದು ದಾವಣಗೆರೆಯ ಹರಿಹರ ತಾಲೂಕಿನ ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟರು.

Home minister Basavaraj bommai
ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ದಾವಣಗೆರೆ: ಮೀಸಲಾತಿ ಮಿತಿ ಶೇ.50 ರಷ್ಟಿದ್ದು, ಅದನ್ನು ಹೆಚ್ಚಿಸಿದಾಗ ಮಾತ್ರ ಪ್ರತಿಯೊಂದು ಸಮಾಜಕ್ಕೂ ನ್ಯಾಯ ಸಿಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.‌

ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಸಾಮಾಜಿಕವಾಗಿ, ಶೈಕ್ಷಣಿಕವಾಗಿ ನಾವು ಮುಂದೆ ಬರಬೇಕೆಂಬ ಹಂಬಲ ಪ್ರತಿಯೊಬ್ಬರಲ್ಲೂ ಇದೆ. ಹಲವು ಸಮಾಜಗಳಲ್ಲಿ ಮೀಸಲಾತಿಗಾಗಿ ಬೇಡಿಕೆಗಳಿವೆ. ಈ ವಿಚಾರದಲ್ಲಿ ಸಿಎಂ ಯಡಿಯೂರಪ್ಪನವರು ದಿಟ್ಟ ನಿಲುವು ತೆಗೆದುಕೊಳ್ಳಲಿದ್ದಾರೆ. ಅವಕಾಶ ಬಂದಾಗ ಚರ್ಚಿಸಿ ಮೀಸಲಾತಿ ಹೆಚ್ಚಿಸಬೇಕಾಗಿದೆ ಎಂದರು.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಧಿಕಾರಿಗೆ ಕೋವಿಡ್ ದೃಢ.. ಎರಡೂ ಡೋಸ್ ಲಸಿಕೆ ಪಡೆದಿದ್ದ ಡಿಸಿ!

ಎಲ್ಲಾ ಸಮುದಾಯಕ್ಕೆ ಮೀಸಲಾತಿ ನೀಡುವ ಸಲುವಾಗಿ ನಿವೃತ್ತ ‌ನ್ಯಾಯಮೂರ್ತಿ ನೇತೃತ್ವದ ಸಮಿತಿಯನ್ನು ಕೂಡ ರಚಿಸಲಾಗಿದೆ ಎಂದು ಸಚಿವರು ಹೇಳಿದರು.

Last Updated : Apr 5, 2021, 7:07 AM IST

ABOUT THE AUTHOR

...view details