ಕರ್ನಾಟಕ

karnataka

ETV Bharat / state

231 ಎಕರೆ ಗೋಮಾಳ ಕಬಳಿಕೆ ಆರೋಪ: ಕುರಿಗಳೊಂದಿಗೆ ತಾಲೂಕು ಕಚೇರಿಗೆ ರೈತರ ಮುತ್ತಿಗೆ - ಕುರಿಗಳೊಂದಿಗೆ ಹೊನ್ನಾಳಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ರೈತರು

ಗ್ರಾಮದ ಪ್ರಭಾವಿಗಳು ಸುಮಾರು 231 ಎಕರೆ ಗೋಮಾಳ ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿ ರೈತರು ಕುರಿಗಳೊಂದಿಗೆ ಹೊನ್ನಾಳಿಯ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

illegally-aquisition-of-231-acres-of-land-in-davanagere
231 ಎಕರೆ ಗೋಮಾಳ ಕಬಳಿಕೆ ಆರೋಪ : ಕುರಿಗಳೊಂದಿಗೆ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ರೈತರು

By

Published : Jun 23, 2022, 4:25 PM IST

Updated : Jun 23, 2022, 4:56 PM IST

ದಾವಣಗೆರೆ: ನೂರಾರು ಎಕರೆ ಗೋಮಾಳ ಜಮೀನನ್ನು ಪ್ರಭಾವಿಗಳು ಕಬಳಿಸಿರುವುದಾಗಿ ಆರೋಪಿಸಿ, ಗೋಮಾಳ ಜಮೀನು ಉಳಿಸುವ ಸಲುವಾಗಿ ಕುರಿಗಳಸಹಿತ ಅರಬಗಟ್ಟೆ ಗ್ರಾಮದ ರೈತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಜಿಲ್ಲೆಯ ಹೊನ್ನಾಳಿ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು.


ಅರಬಗಟ್ಟೆ ಗ್ರಾಮದ ಸುತ್ತಮುತ್ತಲಿನ ಸರ್ವೇ ನಂಬರ್ 7 ನಲ್ಲಿ ಸುಮಾರು 231 ಎಕರೆ ಭೂಮಿಯನ್ನು ಗ್ರಾಮದ ಪ್ರಭಾವಿಗಳು ಒತ್ತುವರಿ ಮಾಡಿದ್ದು, ತಡೆಯುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ರೈತರು ಆಗ್ರಹಿಸಿದ್ದರು. ಇದರಿಂದ ಯಾವುದೇ ಪ್ರಯೋಜನವಾಗದ ಕಾರಣ ಆಕ್ರೋಶಗೊಂಡು ಇಂದು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ, ಪ್ರಭಾವಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ :ಚಾಮರಾಜನಗರ : ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್ ಇಲ್ಲದೆ ರೋಗಿಗಳ ಪರದಾಟ

Last Updated : Jun 23, 2022, 4:56 PM IST

ABOUT THE AUTHOR

...view details