ಕರ್ನಾಟಕ

karnataka

By

Published : Dec 2, 2022, 8:18 PM IST

ETV Bharat / state

ಪ್ರತ್ಯೇಕ ಎರಡು ಅಪಘಾತ ಪ್ರಕರಣ, ಇಬ್ಬರು ಯುವಕರ ಸಾವು, ಒಬ್ಬನಿಗೆ ಗಂಭಿರ ಗಾಯ

ದಾವಣಗೆರೆ ಜಿಲ್ಲೆಯ ಹರಿಹರದ ಕಡೆಯಿಂದ ಬರುತ್ತಿದ ಕಾರು ದ್ವೀಚಕ್ರವಾಹನಕ್ಕೆ ಅಪ್ಪಳಿಸಿದ ಪರಿಣಾಮ ಜೀವನ ಕುಮಾರ್ (26), ದಯಾನಂದ(27) ಎಂಬ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದಾರೆ. ಮೃತ ಯುವಕರು ದಾವಣಗೆರೆ ನಗರದ ಕೆಬಿ ಬಡಾವಣೆಯ ನಿವಾಸಿಗಳು ಎಂದು ತಿಳಿದು ಬಂದಿದೆ.

In two separate accident cases, two youths died, one seriously injured
ಪ್ರತ್ಯೇಕ ಎರಡು ಅಪಘಾತ ಪ್ರಕರಣ, ಇಬ್ಬರು ಯುವಕರು ಸಾವು, ಒಬ್ಬನಿಗೆ ಗಂಭಿರ ಗಾಯ

ದಾವಣಗೆರೆ:ನಗರದಲ್ಲಿ ನಡೆದ ಪ್ರತ್ಯೇಕ ಎರಡು ಅಪಘಾತಗಳಿಗೆ ಸಂಬಂಧಿಸಿದಂತೆ ಇಬ್ಬರು ಯುವಕರು ಸಾವನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರವಾಹನದಲ್ಲಿದ್ದ ಇಬ್ಬರು ಯುವಕರು ಕೊನೆಯುಸಿರೆಳೆದಿದ್ದಾರೆ. ಇನ್ನು ಈ ಘಟನೆ ದಾವಣಗೆರೆಯ ಪಿಬಿ ರಸ್ತೆಯ ಗೋಕುಲ್ ಹೋಟೆಲ್ ಬಳಿ ಸಂಭವಿಸಿದೆ.

ದಾವಣಗೆರೆ ಜಿಲ್ಲೆಯ ಹರಿಹರದ ಕಡೆಯಿಂದ ಬರುತ್ತಿದ ಕಾರು ದ್ವಿಚಕ್ರವಾಹನಕ್ಕೆ ಅಪ್ಪಳಿಸಿದ ಪರಿಣಾಮ ಜೀವನ ಕುಮಾರ್ (26), ದಯಾನಂದ(27) ಎಂಬ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದಾರೆ. ಮೃತ ಯುವಕರು ದಾವಣಗೆರೆ ನಗರದ ಕೆಬಿ ಬಡಾವಣೆಯ ನಿವಾಸಿಗಳು ಎಂದು ತಿಳಿದು ಬಂದಿದೆ.

ಇದಲ್ಲದೇ , ಪಿಬಿ ರಸ್ತೆಯ ಜಿಎಂಐಟಿ ಕಾಲೇಜ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಆಂಜನೇಯ (21 )ಎಂಬ ಯುವಕ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್​​​​​ನ ಚಾಲಕನ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ. ಈ ಬಗ್ಗೆ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಒದಿ:ಶಾಲೆಯ ಎರಡನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿ

ABOUT THE AUTHOR

...view details