ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವದಂತಿ: ಗ್ರಾಮಸ್ಥರ ಗೊಂದಲ ಬಗೆಹರಿಸಿದ ರೇಣುಕಾಚಾರ್ಯ - MLA Renukacharya

ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಾರೆ ಎಂಬ ವದಂತಿ ನಂಬಿದ ಜನ ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಬಂದ ಶಾಸಕ ಎಂ.ಪಿ. ರೇಣುಕಾಚಾರ್ಯ ಗೊಂದಲ ಬಗೆಹರಿಸಿ ಜನರನ್ನು ಸಮಾಧಾನಪಡಿಸಿದರು.

Kadadakatte villagers' opposition to quarantine
ಗ್ರಾಮಸ್ಥರ ಗೊಂದಲ ಬಗೆಹರಿಸಿದ ಶಾಸಕ ರೇಣುಕಾಚಾರ್ಯ

By

Published : May 10, 2020, 3:21 PM IST

ದಾವಣಗೆರೆ : ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಘಟನೆ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದಲ್ಲಿ ನಡೆದಿದೆ.

ತಾಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೊರೊನಾ ಸೋಂಕಿತರನ್ನು ಕ್ವಾರಂಟೈನ್ ಮಾಡಲು ಸಿದ್ಧತೆ ಮಾಡಿಕೊಂಡಿತ್ತು. ಆದರೆ, ಇಲ್ಲಿ ವಿವಿಧೆಡೆಯಿಂದ ಕೊರೊನಾ ಸೋಂಕಿತರನ್ನು ಕರೆತಂದು ಚಿಕಿತ್ಸೆ ಕೊಡಲಾಗುತ್ತದೆ ಎಂದು ಯಾರೋ ಅಪಪ್ರಚಾರ ಮಾಡಿದ್ದರು. ಇದು ಸ್ಥಳೀಯರಲ್ಲಿ ಆತಂಕ ಮೂಡಿತ್ತು.

ಗ್ರಾಮಸ್ಥರ ಗೊಂದಲ ಬಗೆಹರಿಸಿದ ಶಾಸಕ ರೇಣುಕಾಚಾರ್ಯ

ಹೀಗಾಗಿ, ಗ್ರಾಮಸ್ಥರು ಕ್ವಾರಂಟೈನ್ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಶಾಸಕ ಎಂ.ಪಿ. ರೇಣುಕಾಚಾರ್ಯ, ಇಲ್ಲಿ ಯಾರಿಗೂ ಚಿಕಿತ್ಸೆ ನೀಡುವುದಿಲ್ಲ. ಕ್ವಾರಂಟೈನ್ ಮಾಡಲು ಮಾತ್ರ ಸಿದ್ಧತೆ ನಡೆಸಿದ್ದರು. ಆದರೆ, ನನಗೆ ನಿಮ್ಮ ಆರೋಗ್ಯ ಮುಖ್ಯ. ಹಾಗಾಗಿ, ಕ್ವಾರಂಟೈನ್ ಮಾಡಲು ಬಿಡುವುದಿಲ್ಲ. ಜನರು ಆತಂಕಗೊಳ್ಳುವುದು ಬೇಡ ಎಂದು ಭರವಸೆ ನೀಡಿ, ಜನರ ಮನವೊಲಿಸಿದರು.

For All Latest Updates

ABOUT THE AUTHOR

...view details