ದಾವಣಗೆರೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಎಲ್ಲದಕ್ಕೂ ಟೀಕೆ ಮಾಡಿದರೆ ಏನೂ ಹೇಳಲು ಆಗದು. ಸರ್ಕಾರದ ತಪ್ಪುಗಳಿದ್ದರೆ ಹೇಳಲಿ, ತಿದ್ದಿಕೊಳ್ಳುತ್ತೇವೆ. ಕಾಂಗ್ರೆಸ್ ಪಕ್ಷ ಇರುವುದೇ ಟೀಕೆ ಮಾಡಲು ಎಂದುಕೊಂಡಿದ್ದರೆ ನಾವೇನು ಹೇಳುವುದಕ್ಕಾಗುತ್ತೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಹರಿಹರ ತಾಲೂಕಿನ ಬೆಳ್ಳೂಡಿಯ ಕನಕ ಗುರುಪೀಠದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಆಗಿದ್ದ ಸಿದ್ದರಾಮಯ್ಯರಿಗೆ ಎಲ್ಲವೂ ತಿಳಿದಿದೆ. ಆದರೂ ಸುಖಾಸುಮ್ಮನೆ ಆರೋಪ ಮಾಡುತ್ತಾರೆ. ರಾಜ್ಯದಲ್ಲಿ ಈ ಹಿಂದೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಬರಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಹಾಗೂ ದೇವೇಗೌಡರಿಗೆ ಜೊತೆಯಾಗಿ ಭೇಟಿ ನೀಡಿ ಎಂದರೂ ಜನರ ಸಮಸ್ಯೆ ಆಲಿಸಲಿಲ್ಲ. ಆದರೀಗ ಸರ್ಕಾರದ ಬಗ್ಗೆ ವಿನಾಕಾರಣ ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದರು.
ಗ್ರಾಪಂ ಚುನಾವಣೆಗೆ ನಾವು ಸಿದ್ಧ:
ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಆದ್ರೆ, ಮಹಾಮಾರಿ ಕೊರೊನಾ ಸೋಂಕು ಹರಡುತ್ತಿರುವ ಕಾರಣ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚುನಾವಣೆಯನ್ನು ಮುಂದೂಡಿದರೆ ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿವೆ. ಸರ್ಕಾರದ್ದು ಕೂಡ ಇದೇ ನಿಲುವು. ಈ ಹಿನ್ನೆಲೆಯಲ್ಲಿ ವಿಪಕ್ಷ ಜೊತೆ ಸಭೆ ನಡೆಸುವ ಪ್ರಸ್ತಾಪ ಇಲ್ಲ. ಆದ್ರೆ, ಚುನಾವಣಾ ಆಯೋಗ ಹಾಗೂ ಕೋರ್ಟ್ ಚುನಾವಣೆ ನಡೆಸಲೇಬೇಕು ಎಂದರೆ ನಾವು ರೆಡಿ ಇದ್ದೇವೆ. ಎಲ್ಲಾ ಪಕ್ಷಗಳ ನಾಯಕರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಯತ್ನಾಳ್ ಪ್ರಕರಣ ಮುಗಿದ ಅಧ್ಯಾಯ: