ಕರ್ನಾಟಕ

karnataka

ದಾವಣಗೆರೆ ಜನರ ಪ್ರೀತಿ ವಿಶ್ವಾಸವಿದೆ, ಪ್ರಾಮಾಣಿಕ ಕೆಲಸ ಮಾಡುತ್ತೇನೆ: ಸಚಿವ ಭೈರತಿ

By

Published : Jan 27, 2022, 5:38 AM IST

Updated : Jan 27, 2022, 7:00 AM IST

ನನಗೆ ಬೇರೆ ಜಿಲ್ಲೆ ಬೇಡ, ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲದೆ ಕಾರ್ಯ ನಿರ್ವಹಿಸುತ್ತೇವೆ. ಬೆಂಗಳೂರು ಅಭಿವೃದ್ಧಿಗೆ ಸಿಎಂ 6 ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಅಲ್ಲಿ ಸಿಎಂ ಇದ್ದರೆ ಮಾತ್ರ ಆ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂದು ಸಚಿವ ಭೈರತಿ ಬಸವರಾಜ್ ಹೇಳಿದರು.

minister-byrathi-basavaraj-reacts-on-appointment-of-district-in-charge-ministers
ಸಚಿವ ಭೈರತಿ ಬಸವರಾಜ್

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಿಂದ ನನಗೆ ಯಾವುದೇ ಬೇಸರ ಇಲ್ಲ. ಜಿಲ್ಲೆಯ ಜನರ ಪ್ರೀತಿ ವಿಶ್ವಾಸವಿದೆ, ಇರುವಷ್ಟು ದಿನ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಪ್ರತಿಕ್ರಿಯಿಸಿದ್ದಾರೆ.

ದಾವಣಗೆರೆಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಈ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಬೇರೆ ಜಿಲ್ಲೆ ಬೇಡ, ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲದೆ ಕಾರ್ಯ ನಿರ್ವಹಿಸುತ್ತೇವೆ. ಬೆಂಗಳೂರು ಅಭಿವೃದ್ಧಿಗೆ ಸಿಎಂ 6 ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಅಲ್ಲಿ ಸಿಎಂ ಇದ್ದರೆ ಮಾತ್ರ ಆ ಕಾರ್ಯಕ್ರಮ ಯಶಸ್ವಿಯಾಗುತ್ತದೆ. ಅದ್ದರಿಂದ ನಾವು ಯಾರೂ ಕೂಡ ಬೆಂಗಳೂರು ಉಸ್ತುವಾರಿ ಕೊಡಿ ಎಂದು ಕೇಳಿಲ್ಲ ಎಂದರು.

ಸಚಿವ ಭೈರತಿ ಬಸವರಾಜ್ ಹೇಳಿಕೆ

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ನಮಗೆ ಸ್ವಂತ ಜಿಲ್ಲೆ ಬಿಟ್ಟು ಬೇರೆ ಬೇರೆ ಜಿಲ್ಲೆಗಳ ಉಸ್ತುವಾರಿ ಕೊಡಲಾಗಿದೆ. ಯಾವ ಮಾನದಂಡ ಇಟ್ಟಕೊಂಡು ಹೀಗೆ ಮಾಡಿದ್ದಾರೆ ಎಂದು ಗೊತ್ತಿಲ್ಲ. ಹೊಸ ಪ್ರಯೋಗ ಮಾಡಲಾಗಿದೆ, ಯಾರಿಗೂ ಅಸಮಾಧಾನ ಇಲ್ಲ. ಉತ್ತಮ ನಿರ್ಹಹಣೆಯಿಂದ ಮುಖ್ಯಮಂತ್ರಿಯವರ ಕೈ ಬಲಪಡಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ:ಬಿಬಿಎಂಪಿ ಚುನಾವಣೆ ಗೆಲ್ಲುವ ಸಂಕಲ್ಪದೊಂದಿಗೆ ಸಿದ್ಧತೆ ಆರಂಭ: ಸಿಎಂ ಬೊಮ್ಮಾಯಿ

Last Updated : Jan 27, 2022, 7:00 AM IST

ABOUT THE AUTHOR

...view details