ಕರ್ನಾಟಕ

karnataka

ETV Bharat / state

ವಿಧಾನಸಭೆ ಚುನಾವಣಾ ಕಣದಿಂದ ಹಿಂದೆ ಸರಿದ ಶಾಸಕ ರವೀಂದ್ರನಾಥ್​​

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಎಸ್​.ಎ.ರವೀಂದ್ರನಾಥ್​ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

By

Published : Apr 10, 2023, 9:58 PM IST

mla-ravindranath-withdrew-from-the-assembly-election
ವಿಧಾನಸಭೆ ಚುನಾವಣಾ ಕಣದಿಂದ ಹಿಂದೆ ಸರಿದ ಶಾಸಕ ರವೀಂದ್ರನಾಥ್​​

ದಾವಣಗೆರೆ :ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್​.ಎ.ರವೀಂದ್ರನಾಥ್​ ಅವರು ವಿಧಾನಸಭೆ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಚುನಾವಣೆಗೆ ಸ್ಪರ್ಧಿಸುವಂತೆ ಬೆಂಬಲಿಗರು ಒತ್ತಾಯಿಸಿದ್ದರೂ ಅನಾರೋಗ್ಯ ಕಾರಣದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ರವೀಂದ್ರನಾಥ್​​ ಹೇಳಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿರುವ ಇವರು, ದಾವಣಗೆರೆ ಉತ್ತರ ಮತಕ್ಷೇತ್ರದಿಂದ ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್​​ ಕೊಡುತ್ತಾರೋ ಅವರ ಪರವಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ. ದಾವಣಗೆರೆ ಉತ್ತರ ಮತಕ್ಷೇತ್ರದ ಹಾಲಿ ಶಾಸಕರಾಗಿರುವ ಎಸ್.ಎ.ರವೀಂದ್ರನಾಥ್, ಮಾಯಕೊಂಡ ವಿಧಾನಸಭಾ ಕ್ಷೇತ್ರದಿಂದ 1994, 1999 ಹಾಗೂ 2004ರಲ್ಲಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಬಳಿಕ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ 2008 ಹಾಗೂ 2018ರಲ್ಲಿ ಗೆದ್ದು, ಒಟ್ಟು ಐದು ಬಾರಿ ಶಾಸಕರಾಗಿದ್ದರು. ಇವರು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮತ್ತು ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ರವೀಂದ್ರನಾಥ್ ವರ ಪುತ್ರ ಬಸವರಾಜ್ ಶಿರಮಗೊಂಡನಹಳ್ಳಿ ಗ್ರಾಪಂ ಸದಸ್ಯರಾಗಿದ್ದು, ಓರ್ವ ಪುತ್ರಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆಯಾಗಿದ್ದರು. ಇನ್ನೋರ್ವ ಪುತ್ರಿ ಹಾಲಿ ಮಹಾನಗರ ಪಾಲಿಕೆ ಸದಸ್ಯೆಯಾಗಿದ್ದಾರೆ. ತನ್ನ ಕುಟುಂಬಸ್ಥರಿಗೆ ಟಿಕೆಟ್​ ಕೇಳದೆ ಪಕ್ಷಕ್ಕಾಗಿ ದುಡಿಯುವುದಾಗಿ ಹೇಳಿದರು.

ಕಾಂಗ್ರೆಸ್ ಮುಖಂಡ ಜೆಡಿಎಸ್​ ಸೇರ್ಪಡೆ ಸಾಧ್ಯತೆ : ಕಾಂಗ್ರೆಸ್​​​ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಹೊದಿಗೆರೆ ರಮೇಶ ಜೆಡಿಎಸ್ ಸೇರುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಹಿತೈಷಿಗಳ ಸಭೆ ನಡೆಸಿ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಹೇಳಿರುವ ಅವರು ಜೆಡಿಎಸ್ ಕಡೆ ಮುಖ ಮಾಡುವ ಸೂಚನೆ ನೀಡಿದ್ದಾರೆ.

ಕಳೆದ ಮೂರು ಚುನಾವಣೆಯಲ್ಲಿ ಚನ್ನಗಿರಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಅವರು 25 ರಿಂದ 30 ಸಾವಿರ ಮತಗಳನ್ನು ಪಡೆದಿದ್ದರು. ಈ ಕಾರಣದಿಂದ ಕಾಂಗ್ರೆಸ್ ಸೇರಿದ್ದರು. ಆದರೆ ಅಂತಿಮವಾಗಿ ಚನ್ನಗಿರಿ ಕ್ಷೇತ್ರದಿಂದ ಬಸವರಾಜ್ ಶಿವಗಂಗಾ ಅವರಿಗೆ ಕಾಂಗ್ರೆಸ್ ಹೈ ಕಮಾಂಡ್​​ ಟಿಕೆಟ್ ನೀಡಿದ್ದರಿಂದ ಹೊದಿಗೆರೆ ರಮೇಶ್ ಅಸಮಾಧಾನಗೊಂಡಿದ್ದಾರೆ. ಇನ್ನು, ದಾವಣಗೆರೆ ಜಿಲ್ಲೆಯ ಪ್ರತಿಯೊಂದು ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಮತ ತರುವ ಶಕ್ತಿ ನನಗಿತ್ತು. ಆದರೆ ಇಂತಹ ಪರಿಸ್ಥಿತಿಯಲ್ಲಿ ನನಗೆ ಟಿಕೆಟ್ ತಪ್ಪಿದೆ.‌ ಈ ಬಗ್ಗೆ ಹಿತೈಷಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ಇದನ್ನೂ ಓದಿ :ಕುಂದಗೋಳದಲ್ಲಿ ಶಿವಳ್ಳಿ ಕುಟುಂಬಕ್ಕೆ ಟಿಕೆಟ್ ಕೊಡದಿದ್ರೆ ಬಂಡಾಯ ಸ್ಪರ್ಧೆ: ಮುತ್ತಣ್ಣ ಶಿವಳ್ಳಿ

ABOUT THE AUTHOR

...view details