ದಾವಣಗೆರೆ :ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ, ಯಡಿಯೂರಪ್ಪನವರು ಸಿಎಂ ಆಗಿ ಮುಂದಿವರೆಯುವುದು ಅಷ್ಟೇ ಸತ್ಯ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದರು.
ಶಾಸಕ ರೇಣುಕಾಚಾರ್ಯ ಮಾತನಾಡಿದರು ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸೂಚನೆಗೆ ತಲೆಬಾಗುವುದಾಗಿ ಸಿಎಂ ಹೇಳಿದ್ದಾರೆ. ಈವರೆಗೂ ಹೈಕಮಾಂಡ್ ಸೂಚಿಸಿಲ್ಲ. ಆದ್ದರಿಂದ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಇನ್ನೂ ಎರಡುವರೆ ವರ್ಷ ಸಿಎಂ ಆಗಿ ಯಡಿಯೂರಪ್ಪ ಅವರೇ ಮುಂದುವರೆಯುತ್ತಾರೆ ಎಂದರು.
ನಾನು ಕೂಡ ಇಂದು ಸಂಜೆ ಬೆಂಗಳೂರಿಗೆ ಹೋಗಿ ಸಿಎಂ ಭೇಟಿ ಮಾಡ್ತೇನೆ. ಇದು ಸಿಎಂ ಪೂರ್ವ ನಿಯೋಜನೆ ಭೇಟಿಯಾಗಿದೆ. ಯಾವುದೇ ರಾಜಕೀಯ ಚರ್ಚೆ ಇಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಜೊತೆ ಚರ್ಚೆ ಮಾಡಲು ಹೊರಟಿರುವೆ ಎಂದು ತಿಳಿಸಿದರು.
ಶಾಸಕ ರೇಣುಕಾಚಾರ್ಯ ಮಾತನಾಡಿದರು ಪರ್ಯಾಯ ನಾಯಕತ್ವದ ಪ್ರಶ್ನೆಯೇ ಇಲ್ಲ. ಸಿಎಂ ಬದಲಾವಣೆಯಾದ್ರೆ ಮಾತ್ರ ಪರ್ಯಾಯ ನಾಯಕತ್ವದ ಪ್ರಶ್ನೆ ಬರುತ್ತೆ. ಯಡಿಯೂರಪ್ಪ ಸಂಘಟನೆಯಿಂದ ಬೆಳೆದು ಬಂದ ಹಿನ್ನೆಲೆ ಶಿಸ್ತಿನಿಂದ ಹೇಳಿಕೆ ನೀಡಿದ್ದಾರೆ. ನಾವು ಯಡಿಯೂರಪ್ಪ ಅವರ ಬೆಂಬಲಕ್ಕೆ ಸದಾ ಇರುತ್ತೇವೆ ಎಂದರು.
ಓದಿ:ಯಡಿಯೂರಪ್ಪ ನಮ್ಮ ನಾಯಕ, ಸಿಎಂ ಬದಲಾವಣೆ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ್