ಕರ್ನಾಟಕ

karnataka

By

Published : Jan 18, 2022, 4:20 PM IST

ETV Bharat / state

ಅರಬಗಟ್ಟೆ ವಸತಿ ಶಾಲೆಯಲ್ಲಿ ಆರು ಮಕ್ಕಳಿಗೆ ಕೊರೊನಾ.. ಶಾಸಕ ರೇಣುಕಾಚಾರ್ಯ ಭೇಟಿ

ಸಮಾಜಕಲ್ಯಾಣ ಅಧಿಕಾರಿಗಳೊಂದಿಗೆ ಮಾಹಿತಿ ಕಲೆ ಹಾಕಿದ ಅವರು, ಯಾವುದೇ ತೊಂದರೆ, ಸಮಸ್ಯೆಗಳಿದ್ದಲ್ಲಿ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು..

Mla-renukacharya-visits-Aaragagatte-school
ಅರಬಗಟ್ಟೆ ವಸತಿ ಶಾಲೆಗೆ ಶಾಸಕ ರೇಣುಕಾಚಾರ್ಯ ಭೇಟಿ, ಕೊರೊನಾ ವೈರಸ್ ಕುರಿತು ಜಾಗೃತಿ

ದಾವಣಗೆರೆ :ಕೊರೊನಾ ವೇಳೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸಂಚರಿಸುತ್ತಿದ್ದ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿಯಾದ ಎಂ.ಪಿ ರೇಣುಕಾಚಾರ್ಯ ಇದೀಗ ಶಾಲೆಗಳಿಗೆ ಭೇಟಿ ನೀಡುತ್ತ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸುತ್ತಿರುವ ಶಾಸಕ ಎಂ ಪಿ ರೇಣುಕಾಚಾರ್ಯ..

ಇದೀಗ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ವಸತಿ ಶಾಲೆಯಲ್ಲಿ ಆರು ಮಕ್ಕಳಿಗೆ ಕೊರೊನಾ ಸೋಂಕು ವಕ್ಕರಿಸಿದ್ದರಿಂದ‌ ಶಾಸಕರು ಭೇಟಿ ನೀಡಿ ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.

ಸಮಾಜಕಲ್ಯಾಣ ಅಧಿಕಾರಿಗಳೊಂದಿಗೆ ಮಾಹಿತಿ ಕಲೆ ಹಾಕಿದ ಅವರು, ಯಾವುದೇ ತೊಂದರೆ, ಸಮಸ್ಯೆಗಳಿದ್ದಲ್ಲಿ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಓದಿ:ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವ ಎಲ್ಲ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು : ಡಿಕೆಶಿ ಆಗ್ರಹ

For All Latest Updates

TAGGED:

ABOUT THE AUTHOR

...view details