ಕರ್ನಾಟಕ

karnataka

ETV Bharat / state

ಕೊಟ್ಟ ಮಾತನ್ನು ಉಳಿಸಿಕೊಳ್ಳದ ಸಿಎಂ ಬಿಎಸ್​ವೈ... ಕೆಕೆಒ ದಿಂದ ''ನುಡಿದಂತೆ ನಡೆ'' ಅಭಿಯಾನ - campaign against CM BSY

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚುನಾವಣಾ ಪೂರ್ವ ಪ್ರಚಾರದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು ನಾನು ಮುಖ್ಯಮಂತ್ರಿಯಾದರೆ 24 ಗಂಟೆಯೊಳಗೆ ಕ್ಷತ್ರಿಯ ಸಮುದಾಯವನ್ನು ಪ್ರವರ್ಗ 3ಬಿ ಯಿಂದ 2ಎ ಗೆ ಸೇರಿಸುತ್ತೇನೆ ಎಂದು ಹೇಳಿದ್ದರು. ಆದ್ರೆ ಸಿಎಂ ಕೊಟ್ಟ ಮಾತನ್ನು ಈಡೇರಿಸಿಲ್ಲ. ಈ ಹಿನ್ನಲೆ ಕ್ಷತ್ರಿಯ ಸಮಾಜದ ಮುಖಂಡರು ನುಡಿದಂತೆ ನಡೆ ಎಂದು ಅಭಿಯಾನಕ್ಕೆ ಮುಂದಾಗಿದ್ದಾರೆ.

''Nudidante nade'' Campaign against CM BSY
''ನುಡಿದಂತೆ ನಡೆ'' ಅಭಿಯಾನ

By

Published : Feb 1, 2020, 3:19 PM IST

ದಾವಣಗೆರೆ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಕ್ಷತ್ರಿಯ ಸಮುದಾಯದ ಮುಖಂಡರು ''ನುಡಿದಂತೆ ನಡೆ'' ಎಂಬ ಅಭಿಯಾನಕ್ಕೆ ಮುಂದಾಗಿದ್ದಾರೆ.

''ನುಡಿದಂತೆ ನಡೆ'' ಅಭಿಯಾನ

ಮಾಧ್ಯಮಗೋಷ್ಟಿಯಲ್ಲಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ರಾಜ್ಯಾಧ್ಯಕ್ಷ ಉದಯ್ ಸಿಂಗ್ ಮಾತನಾಡಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಚುನಾವಣಾ ಪೂರ್ವ ಪ್ರಚಾರದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು ತಾವು ಮುಖ್ಯಮಂತ್ರಿಯಾದರೆ 24 ಗಂಟೆಯೊಳಗೆ ಕ್ಷತ್ರಿಯ ಸಮುದಾಯವನ್ನು ಪ್ರವರ್ಗ 3ಬಿ ಯಿಂದ 2ಎ ಗೆ ಸೇರಿಸುವುದಾಗಿ ಭರವಸೆ ನೀಡಿದ್ದರು. ಆದ್ರೆ ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ನುಡಿದಂತೆ ನಡೆ ಎಂದು ರಾಜ್ಯಾದ್ಯಂತ ಅಭಿಯಾನ ನಡೆಸುವುದಾಗಿ ತಿಳಿಸಿದರು.

ಬರುವ ಬಜೆಟ್​ನಲ್ಲಿ ಸಮುದಾಯವನ್ನು 2ಎ ಗೆ ಸೇರಿಸುವಂತೆ ರಾಜ್ಯಾದ್ಯಂತ ನುಡಿದಂತೆ ನಡೆ ಎಂಬ ಸಾಮಾಜಿಕ ಜಾಲತಾಣ ಅಭಿಯಾನ ಆರಂಭಿಸಿದ್ದೇವೆ. ಈ ಅಭಿಯಾನವನ್ನು ಮಧ್ಯ ಕರ್ನಾಟಕ ಕೇಂದ್ರ ಬಿಂದು ದಾವಣಗೆರೆಯಿಂದಲೇ ಇಂದಿನಿಂದ ಶಿವಾಜಿ‌ ಜಯಂತಿಯವರೆಗೆ ನಡೆಸಲಿದ್ದೇವೆ ಎಂದು ಮಾಹಿತಿ ನೀಡಿದರು.

ABOUT THE AUTHOR

...view details