ಕರ್ನಾಟಕ

karnataka

ETV Bharat / state

ಜಗಳೂರಲ್ಲಿ ಆಸ್ತಿ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ - Property disputes Latest News In Davanagere

ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿ ರಾಡು, ದೊಣ್ಣೆಯಿಂದ ಹೊಡೆದಾಡಿಕೊಂಡಿರುವ ಘಟನೆ ಜಗಳೂರು ತಾಲೂಕಿನ ಕೊರಟಿಕೆರೆ ಗ್ರಾಮದಲ್ಲಿ ನಡೆದಿದೆ.

ಆಸ್ತಿ ವಿಚಾರಕ್ಕೆ 2 ಕುಟುಂಬದ ನಡುವೆ ಮಾರಾಮಾರಿ

By

Published : Nov 18, 2019, 4:27 PM IST

ದಾವಣಗೆರೆ: ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿ ರಾಡು, ದೊಣ್ಣೆಯಿಂದ ಹೊಡೆದಾಡಿಕೊಂಡಿರುವ ಘಟನೆ ಜಗಳೂರು ತಾಲೂಕಿನ ಕೊರಟಿಕೆರೆ ಗ್ರಾಮದಲ್ಲಿ ನಡೆದಿದೆ.

ಆಸ್ತಿ ವಿಚಾರಕ್ಕೆ 2 ಕುಟುಂಬದ ನಡುವೆ ಮಾರಾಮಾರಿ

ಗಲಾಟೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಹೊಡೆದಾಡಿದ ಸನ್ನಿವೇಶವನ್ನು ಗ್ರಾಮಸ್ಥರೊಬ್ಬರು ಮೊಬೈಲ್​​ನಲ್ಲಿ‌ ಸೆರೆ ಹಿಡಿದಿದ್ದಾರೆ. ಪ್ರಕಾಶ್, ನಾಗರಾಜ್, ಜಯಮ್ಮ, ಶಂಕರಮ್ಮ ಎನ್ನುವವರ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ತೀವ್ರ ಗಾಯಗೊಂಡಿದ್ದ ನಾಗರಾಜ್ ಅವರನ್ನು ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ ಮೂವರನ್ನು ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ರಾಮದಲ್ಲಿ ಐದಾರು ವರ್ಷಗಳಿಂದ ಈ ಎರಡು ಕುಟುಂಬಗಳ ನಡುವೆ ಜಾಗವೊಂದರ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ನಿನ್ನೆ ಜಯಮ್ಮನವರ ಜಾಗದಲ್ಲಿ ಉಮೇಶ್, ರವಿ, ಬಸವರಾಜಪ್ಪ ಮೆಕ್ಕೆಜೋಳದ ತೆನೆ ಲೋಡ್ ಹಾಕಿದ್ದರು. ಇದನ್ನು ತೆಗೆಯುವಂತೆ ಮಾತಿನ ಚಕಮಕಿ ‌ನಡೆದು ಹೊಡೆದಾಡುವ ಮಟ್ಟಕ್ಕೆ ತಲುಪಿದೆ. ಸದ್ಯ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

For All Latest Updates

ABOUT THE AUTHOR

...view details