ಕರ್ನಾಟಕ

karnataka

ETV Bharat / state

ದಾವಣಗೆರೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ: ನಾಲ್ವರ ಬಂಧನ - ದಾವಣಗೆರೆಯ ಆರ್​ಎಂಸಿ ಪೊಲೀಸ್​ ಠಾಣೆ

ಈಗಾಗಲೇ ರಾಜ್ಯ ಸರ್ಕಾರ ಗೋವುಗಳ ಸಾಗಾಟ ಹಾಗೂ ವಧೆಗೆ ನಿಷೇಧ ಹೇರಿ‌ ಆದೇಶ ಹೊರಡಿಸಿದ್ದರೂ ಕೂಡ ಗೋವುಗಳ ಸಾಗಾಟ ನಿಂತಿಲ್ಲ. ಈಗ ದಾವಣಗೆರೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

davanagere
ಗೋವುಗಳ ರಕ್ಷಣೆ

By

Published : Mar 14, 2021, 3:13 PM IST

ದಾವಣಗೆರೆ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ಆರ್​ಎಂಸಿ ಠಾಣೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಗೋವುಗಳ ರಕ್ಷಣೆ

ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಎರಡು ಲಾರಿಯಲ್ಲಿ ಸಾಗಿಸುತ್ತಿದ್ದ 16 ಗೋವುಗಳನ್ನು ರಕ್ಷಿಸಲಾಗಿದೆ. ಹಾವೇರಿಯಿಂದ ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಲಾರಿ ಚಾಲಕ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಆರ್​ಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details