ಕರ್ನಾಟಕ

karnataka

ETV Bharat / state

ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನಿಗದಿಪಡಿಸಲು ಪ್ರತಿಭಟನೆ - protest by farmers in davanagere

ಪ್ರಧಾನಮಂತ್ರಿಗಳಿಗೆ ರೈತರ ಸಮಸ್ಯೆಗಳು ಮನವರಿಕೆ ಮಾಡುವ ಸಲುವಾಗಿ ಮಾಜಿ ಸಿಎಂ ಜೆ.ಹೆಚ್.ಪಟೇಲ್ ತಮ್ಮನ ಮಗನಾದ ತೇಜಸ್ವಿ ಪಟೇಲ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

protest-by-farmers-against-central-govt-in-davanagere
ಕೇಂದ್ರ ಸರಕಾರ ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನಿಗದಿ ಪಡಿಸಬೇಕು: ತೇಜಸ್ವಿ ಪಟೇಲ್ ಒತ್ತಾಯ

By

Published : Jun 20, 2022, 10:31 PM IST

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಎರಡು ದಿನ ರಾಜ್ಯ ಪ್ರವಾಸದಲ್ಲಿದ್ದು, ಅವರಿಗೆ ರೈತರ ಸಮಸ್ಯೆಗಳನ್ನು ಮನವರಿಕೆ ಮಾಡುವ ಸಲುವಾಗಿ ಮಾಜಿ ಸಿಎಂ ಜೆ.ಹೆಚ್.ಪಟೇಲ್ ತಮ್ಮನ ಮಗ ತೇಜಸ್ವಿ ಪಟೇಲ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ರೈತರು ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಿದರು.


ಕೇಂದ್ರ ಸರಕಾರ ಪ್ರತಿ ವಸ್ತುವಿನ ಬೆಲೆಯನ್ನು ದುಬಾರಿ ಮಾಡಿದ್ದು ರೈತರು ಹೈರಾಣಾಗಿದ್ದಾರೆ. ಬೆಳೆ ಬೆಳೆಯಲು ಅವಶ್ಯಕವಾಗಿರುವ ಗೊಬ್ಬರ, ಬಿತ್ತನೆ ಬೀಜದ ದರ ಗಗನಕ್ಕೇರಿದೆ. ಇದಲ್ಲದೆ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ನೀಡದೆ ಇರುವುದು ರೈತ ಸಮುದಾಯವನ್ನು ಸಂಕಷ್ಟಕ್ಕೀಡುಮಾಡಿದೆ ಎಂದು ದೂರಿದರು.

ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ರೈತರು ಕಬ್ಬು, ಭತ್ತ, ತೆಂಗು, ಅಡಿಕೆ, ಮೆಕ್ಕೆಜೋಳ, ಶೇಂಗಾ ಬೆಳೆಗಳನ್ನು ತಳ್ಳು ಗಾಡಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ವಿನೂತನವಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.

ಇದನ್ನೂಓದಿ:ಮೊಸಳೆ ಹಿಡಿದು ಮನೆಗೆ ತಂದಿದ್ದರಂತೆ! 1ನೇ ತರಗತಿ ಪಠ್ಯದಲ್ಲಿದೆ ಬಾಲ ಮೋದಿಯ ಸಾಹಸ

For All Latest Updates

ABOUT THE AUTHOR

...view details