ಕರ್ನಾಟಕ

karnataka

ಫೋನ್ ಪೇನಲ್ಲಿ ಲಂಚ ಪಡೆದ ಪಿಎಸ್​ಐ, ಪೊಲೀಸ್​ ಕಾನಸ್ಟೇಬಲ್ ಲೋಕಾಯುಕ್ತ ಬಲೆಗೆ

By

Published : Apr 22, 2023, 11:01 PM IST

ಪೋನ್ ಪೇನಲ್ಲಿ ಲಂಚ ಪಡೆದ ಪಿಎಸ್​ಐ ಶಿವನಗೌಡ ಹಾಗೂ ಪೊಲೀಸ್ ಕಾನಸ್ಟೇಬಲ್ ಲಿಂಗರಾಜ್ ನಾಯ್ಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

PSI and Police Constable Lokayukta trap
ಪಿಎಸ್​ಐ, ಪೊಲೀಸ್​ ಕಾನಸ್ಟೇಬಲ್ ಲೋಕಾಯುಕ್ತ ಬಲೆಗೆ

ದಾವಣಗೆರೆ:ಕಾಣೆಯಾದ ಮಹಿಳೆಯನ್ನು ಪತ್ತೆ ಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಪಿಎಸ್​ಐ ಹಾಗೂ ಪೊಲೀಸ್​ ಕಾನಸ್ಟೇಬಲ್ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್​ಐ ಶಿವನಗೌಡ ಹಾಗೂ ಪೋಲಿಸ್ ಕಾನಸ್ಟೇಬಲ್ ಲಿಂಗರಾಜ್ ನಾಯ್ಕ ಲೋಕಾಯುಕ್ತ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ:ಬೇರೊಬ್ಬನ ಜೊತೆ ರೀಲ್ಸ್ ಮಾಡಿದಳೆಂದು ಪ್ರಿಯತಮೆಯನ್ನೇ ಕೊಂದ ಪ್ರೇಮಿ: ಆರೋಪಿ ಬಂಧನ

ಚಿತ್ರದುರ್ಗ ಮೂಲದ ರಂಗಸ್ವಾಮಿ ಎಂಬುವರಿಂದ ಫೋನ್ ಪೇ ಮೂಲಕ‌ 50 ಸಾವಿರ ಲಂಚ ಸ್ವೀಕರಿಸಿದ್ದ ಪಿಎಸ್​ಐ ಹಾಗೂ ಪಿಸಿಯನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್​ ಮಾಡಿದ್ದರು. ನಂತರ ಲೋಕಾಯುಕ್ತ ಪೊಲೀಸರು ತೋಡಿದ್ದ ಖೆಡ್ಡಾಕ್ಕೆ ಪಿಎಸ್​ಐ ಹಾಗೂ ಪಿಸಿ ಬಿದ್ದಿದ್ದಾರೆ.

ಇದನ್ನೂ ಓದಿ:ಅತೀಕ್, ಅಶ್ರಫ್ ಹತ್ಯೆಗೆ ಸೇಡು ತೀರಿಸಿಕೊಳ್ಳುವ ಬೆದರಿಕೆ ಹಾಕಿದ ಅಲ್ ಖೈದಾ

ಫೋನ್ ಮೂಲಕ ಲಂಚ ಸ್ವೀಕರಿಸಿದ ಪಿಎಸ್​ಐ ಹಾಗೂ ಪಿಸಿ:ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ಮಹಿಳೆಯೊಬ್ಬರು ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಕಾಣೆಯಾದ ಮಹಿಳೆ ದಾವಣಗೆರೆಯಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರಿಂದ ದಾವಣಗೆರೆ ಗ್ರಾಮೀಣ ಪೋಲಿಸರು ಮಹಿಳೆಯನ್ನು ಪತ್ತೆ ಹಚ್ಚಿ‌ ಮನೆಗೆ ಕಳುಹಿಸಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಫೋನ್ ಪೇಗೆ ದುಡ್ಡು ಹಾಕುವಂತೆ ಪಿಎಸ್ಐ ಹಾಗೂ ಪಿಸಿ ಹೇಳಿದ್ದಾರೆ. ಶನಿವಾರ ಫೋನ್ ಮೂಲಕ ಹಣ ಸ್ವೀಕರಿಸಿದ ವೇಳೆ ಲೋಕಾಯುಕ್ತ ಪೊಲೀಸರು, ಪಿಎಸ್​ಐ ಹಾಗೂ ಪಿಸಿ ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದಲ್ಲಿ ಇನಸ್ಪೆಕ್ಟರ್​ಗಳಾದ ರಾಷ್ಟ್ರಪತಿ ಹಾಗೂ ಅಂಜನೇಯ ಅವರಿಂದ ದಾಳಿ ನಡೆಸಲಾಗಿದೆ.

ಇದನ್ನೂ ಓದಿ:ಕೊಡಗಿನಲ್ಲಿ ಮತ್ತೆ ಗುಂಡಿನ ಸದ್ದು: ನಿವೃತ್ತ ಎಸ್ಪಿ ಪುತ್ರನಿಂದ ವರ್ತಕನ ಮೇಲೆ ​ಫೈರಿಂಗ್​​

ABOUT THE AUTHOR

...view details