ದಾವಣಗೆರೆ:ರಾಷ್ಟ್ರಮಟ್ಟದ ಸೀನಿಯರ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾಗಿಯಾಗಲು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿರುವ ಕನಕಗುರು ಪೀಠದ ಶಾಖಾ ಮಠದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಗರಡಿ ಮನೆ, ಕ್ರೀಡಾ ಹಾಸ್ಟೆಲ್, ರೈಲ್ವೆ ಹಾಗೂ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕುಸ್ತಿಪಟುಗಳು ಭಾಗವಹಿಸಿದ್ದರು. ಇಲ್ಲಿಂದ ಆಯ್ಕೆಯಾದವರು ಆಂಧ್ರಪ್ರದೇಶದ ವಿಶಾಖಪಟ್ಟಣಂದಲ್ಲಿ ರಾಷ್ಟ್ರಮಟ್ಟದ ಸೀನಿಯರ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸುತ್ತಾರೆ.
ಆಯ್ಕೆ ಪ್ರಕ್ರಿಯೆಗೆ ಸುಮಾರು 200ಕ್ಕೂ ಹೆಚ್ಚು ಅಭ್ಯರ್ಥಿಗಳು ಬಂದಿದ್ದರು. ಸೀನಿಯರ್ ಕುಸ್ತಿಯಲ್ಲಿ ಗೆದ್ದವರಿಗೆ ಭಾರತ ಸರ್ಕಾರದಿಂದ ಹಲವು ಸೌಲಭ್ಯಗಳು ದೊರೆಯಲಿದ್ದು, ಅಂತಾರಾಷ್ಟ್ರೀಯ ಕ್ರೀಡೆಗಳಿಗೆ ತರಬೇತಿಯೂ ದೊರೆಯಲಿದೆ. ಸೀನಿಯರ್ನಲ್ಲಿ ಗೆದ್ದವರಿಗೆ ಒಲಿಂಪಿಕ್ಸ್, ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ನಲ್ಲೂ ಆಡುವ ಅವಕಾಶವನ್ನು ಕೇಂದ್ರ ಸರ್ಕಾರ ಮಾಡಿಕೊಡಲಿದೆ.