ಕರ್ನಾಟಕ

karnataka

By

Published : Jun 3, 2022, 4:02 PM IST

Updated : Jun 3, 2022, 6:16 PM IST

ETV Bharat / state

ಬಸವಣ್ಣನವರ ವಚನಗಳನ್ನು ತಿದ್ದುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ: ಸಿದ್ದಗಂಗಾ ಶ್ರೀ

ಪಠ್ಯ ಪರಿಷ್ಕರಣೆ ವಿಚಾರವಾಗಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

siddalinga swamiji
ಸಿದ್ದಗಾಂಗಾ ಮಠದ ಸಿದ್ದಲಿಂಗ ಸ್ವಾಮೀಜಿ

ದಾವಣಗೆರೆ: ಬಸವಣ್ಣನವರ ವಚನಗಳನ್ನು ತಿದ್ದುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಅದನ್ನು ತಿದ್ದಿದರೆ ಅಪಚಾರ ಮಾಡುವಂತಾಗುತ್ತದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

ದಾವಣಗೆರೆಯಲ್ಲಿ ಪಠ್ಯ ಪರಿಷ್ಕರಣೆ ವಿಚಾರವಾಗಿ ಮಾತನಾಡಿ, ಬಸವಣ್ಣನವರು ಏ‌ನು ಹೇಳಿದ್ದಾರೋ ಅದೇ ವಿಚಾರ ಪಠ್ಯದಲ್ಲಿ ಪ್ರಕಟವಾಗಬೇಕು. ಬಸವಣ್ಣನವರು ಈ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಬಹುದೊಡ್ಡ ಕೊಡುಗೆಯನ್ನು ಸಮಾಜಕ್ಕೆ ನೀಡಿದ್ದಾರೆ. ಈ ವಿಚಾರಗಳು ಕೇವಲ ಒಬ್ಬರಿಗೆ ಇಬ್ಬರಿಗೆ ಬೇಕಾಗಿದ್ದಲ್ಲ. ಎಲ್ಲರಿಗೂ ಬೇಕಾದ ವಿಚಾರಗಳನ್ನು ಬಸವಣ್ಣ ನೀಡಿದ್ದಾರೆ. ಅವರ ವಚನಗಳೇ ನಮಗೆ ಆಧಾರ. ಅವುಗಳನ್ನು ತಿದ್ದದೇ ಹೇಗಿದೆಯೋ ಹಾಗೇ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ‌

ಸಿದ್ದಗಾಂಗಾ ಮಠದ ಸಿದ್ದಲಿಂಗ ಸ್ವಾಮೀಜಿ

ಜನಿವಾರ ಧೀಕ್ಷೆಯನ್ನು ಬಸವಣ್ಣನವರು ನಿರಾಕರಿಸಿ ಹೊರಗೆ ಬಂದಿದ್ದು ಸತ್ಯ. ಆ ವಾಸ್ತವ ವಿಚಾರವನ್ನು ಪಠ್ಯದಲ್ಲಿ ಪ್ರಕಟಗೊಳಿಸುವುದು ಒಳ್ಳೆಯದು. ಇದರ ಬಗ್ಗೆ ಶಿಕ್ಷಣ ಸಚಿವರು ವರದಿ ಕೊಟ್ಟ ನಂತರ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.

ಇದನ್ನೂ ಓದಿ:ಮೋದಿ ಅಧಿಕಾರಕ್ಕೆ ಬಂದ ನಂತರ ದೇಶಕ್ಕೆ ಜಾಗತಿಕ ಮಟ್ಟದಲ್ಲಿ ಗೌರವ ಸಿಕ್ಕಿದೆ: ಶೋಭಾ ಕರಂದ್ಲಾಜೆ

ರಾಜ್ಯದ ಪಠ್ಯ ವಿವಾದ ಬಹಳಷ್ಟು ತಿರುವು ಪಡೆದುಕೊಳ್ಳುತ್ತಿದೆ. ಯಾವದೇ ಕಾರಣದಿಂದ ಇಂತಹ ವಾತಾವರಣ ಉಂಟಾಗಬಾರದು. ಮಕ್ಕಳಿಗೆ ನೈತಿಕ ಶಿಕ್ಷಣದ ಅವಶ್ಯಕತೆ ಇದೆ. ಇಂದಿನ ಪಠ್ಯದಲ್ಲಿ ನೈತಿಕ ಶಿಕ್ಷಣದ ಕೊರತೆ ಎದ್ದು ಕಾಣುತ್ತಿದೆ. ಮೂಲ ವಿಚಾರಗಳನ್ನು ತಿದ್ದದೇ ವಾಸ್ತವ ವಿಚಾರಗಳು ಪಠ್ಯದಲ್ಲಿರಬೇಕು. ಈಗಾಗಲೇ ಪಠ್ಯಪುಸ್ತಕ ರಚನಾ ಸಮಿತಿ, ತಜ್ಞರ ಸಮಿತಿ ಅದಕ್ಕೆ ಮಾರ್ಗದರ್ಶನ ನೀಡುತ್ತಿದೆ. ಈ ವಿವಾದ ಬಗೆಹರಿದು ಮಕ್ಕಳ ಕಲಿಗೆ ಪೂರಕ ವಾತಾವರಣ ನಿರ್ಮಾಣವಾಗಬೇಕಾಗಿದೆ ಎಂದರು.

Last Updated : Jun 3, 2022, 6:16 PM IST

ABOUT THE AUTHOR

...view details