ಕರ್ನಾಟಕ

karnataka

By

Published : Sep 3, 2022, 3:59 PM IST

ETV Bharat / state

ಕಲ್ಯಾಣಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಈಜಲು ಹೋಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಕಲ್ಯಾಣಿಯಲ್ಲಿ ನಡೆದಿದೆ.

student-drowned-in-kalyani-at-davanagere
ಕಲ್ಯಾಣಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ದಾವಣಗೆರೆ : ಈಜಲು ಹೋಗಿ ವಿದ್ಯಾರ್ಥಿಯೋರ್ವ ಮುಳುಗಿ ಸಾವನಪ್ಪಿರುವ ಘಟನೆ ನಗರದ ಹೊಂಡದ ವೃತ್ತದಲ್ಲಿರುವ ಕಲ್ಯಾಣಿಯಲ್ಲಿ ನಡೆದಿದೆ. ಮೃತ ಯುವಕನನ್ನು ಶಂಕರ್ (17) ಎಂದು ಗುರುತಿಸಲಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಪಿಯುಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ ಮೃತ ಶಂಕರ್ ಕಳೆದ ದಿನ ನೂತನವಾಗಿ ನಿರ್ಮಿಸಿರುವ ಕಲ್ಯಾಣಿಯಲ್ಲಿ ಈಜಲು ತೆರಳಿದ್ದಾನೆ. ಈ ಸಂದರ್ಭ ಈಜು ಬಾರದೇ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಹೂ ಕೊಯ್ಯಲು ಹೋಗಿದ್ದವರಿಗೆ ವಿದ್ಯುತ್ ಶಾಕ್; ಬಾವಿಗೆಸೆಯಲ್ಪಟ್ಟು ಮೂವರ ಸಾವು

ABOUT THE AUTHOR

...view details