ಕರ್ನಾಟಕ

karnataka

ಉಪನ್ಯಾಸಕಿಯನ್ನು ವಜಾ ಮಾಡಿದ್ದಕ್ಕೆ ಕೆರಳಿದ ವಿದ್ಯಾರ್ಥಿಗಳು: ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ

By

Published : Jan 4, 2021, 9:12 PM IST

ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಉಪನ್ಯಾಸಕಿ ಶಶಿಕಲಾ ಅವರನ್ನು ಜೈನ್ ಕಾಲೇಜು ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿದೆ. ಕಾರಣವಿಲ್ಲದೆ ಏಕಾಏಕಿ ಕಾಲೇಜಿನಿಂದ ವಜಾ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಹಿನ್ನೆಲೆ ಕಾಲೇಜು ಹೊರಗಡೆ ವಿದ್ಯಾರ್ಥಿಗಳು ಪ್ರತಿಭಟನೆಯ ಮೊರೆ ಹೋಗಿದ್ದರು.

Students protesting against dismissal of lecturer
ಉಪನ್ಯಾಸಕಿಯ ವಜಾ ಮಾಡಿದ್ದರಿಂದ ಕೆರಳಿದ ವಿದ್ಯಾರ್ಥಿಗಳು

ದಾವಣಗೆರೆ: ಕಾಲೇಜು ಆಡಳಿತ ಮಂಡಳಿಯು ಕೆಲ ಶಿಕ್ಷಕರನ್ನು ಸೇವೆಯಿಂದ ತೆಗೆದು ಹಾಕಿದ್ದು, ಆಡಳಿತ ಮಂಡಳಿಯ ನಿರ್ಧಾರ ವಿರೋಧಿಸಿ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆ ಹೊರವಲಯದ ನಗರದ ಬಾಡಾ ಕ್ರಾಸ್ ಬಳಿಯ ಜೈನ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ತಮ್ಮ ನೆಚ್ಚಿನ ಶಿಕ್ಷಕರನ್ನು ಮತ್ತೆ ಸೇವೆಗೆ ತೆಗೆದುಕೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ದಾವಣಗೆರೆ ನಗರದ ಹೊರವಲಯದಲ್ಲಿರುವ ಜೈನ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದರು. ಈ ವೇಳೆ ಕಾಲೇಜು ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಉಪನ್ಯಾಸಕಿ ಶಶಿಕಲಾ ಅವರನ್ನು ಜೈನ್ ಕಾಲೇಜು ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿದೆ. ಕಾರಣವಿಲ್ಲದೆ ಏಕಾಏಕಿ ಕಾಲೇಜಿನಿಂದ ವಜಾ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಹಿನ್ನೆಲೆ ಕಾಲೇಜು ಹೊರಗಡೆ ವಿದ್ಯಾರ್ಥಿಗಳು ಪ್ರತಿಭಟನೆಯ ಮೊರೆ ಹೋಗಿದ್ದರು.

ಆದರೆ ಈ ಕುರಿತು ಮಾತನಾಡಿರುವ ಕಾಲೇಜಿನ ಪ್ರಿನ್ಸಿಪಾಲ್ ಸದಾನಂದ, ಉಪನ್ಯಾಸಕಿ ಶಶಿಕಲಾ ಅವರು ಸರಿಯಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂದು ಕಾಲೇಜಿನ ಕೆಲ ವಿದ್ಯಾರ್ಥಿಗಳು ದೂರು ನೀಡಿದ್ದರಿಂದ ತೆಗೆದು ಹಾಕಲಾಗಿದೆ. ವಿದ್ಯಾರ್ಥಿಗಳ ದೂರಿನ ಮೇರೆಗೆ ಅವರಿಗೆ ತಿಳಿಸಲು ಕರೆಸಿದ್ದವು. ಆದರೆ ಈ ವೇಳೆ ಅವರೇ ರಿಲೀವ್ ಮಾಡಿ ಎಂದು ಕೇಳಿದ್ದರು. ಹೀಗಾಗಿ ನಾವು ರಿಲೀವ್ ಮಾಡಿದ್ದೇವೆ ಎಂದಿದ್ದಾರೆ.

ಸದ್ಯ ಪ್ರಕರಣ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ವಿದ್ಯಾನಗರ ಪೊಲೀಸರು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ:ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ಆತ್ಮಹತ್ಯೆ ಹಿನ್ನೆಲೆ: ಜಿಲ್ಲಾಡಳಿತದಿಂದ ಶಾಂತಿ ಹೋಮ!

ABOUT THE AUTHOR

...view details