ದಾವಣಗೆರೆ:ಶಾಮನೂರು ರಸ್ತೆಯಲ್ಲಿ ಅಪಘಾತಕ್ಕೀಡಾಗಿದ್ದ ಶಾಸಕ ಎಸ್. ಎ. ರವೀಂದ್ರನಾಥ್ ಮೊಮ್ಮಗ ಪ್ರಯಾಣಿಸುತ್ತಿದ್ದ ಕಾರನ್ನು ತೆಗೆದುಕೊಂಡು ಹೋಗಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದೆ.
ಕಾರು ತೆಗೆಯಲು ಬಿಡದ ಸ್ಥಳೀಯರು: ಮನೆ ಮಾಲೀಕನ ಮನವೊಲಿಸಿ ಸ್ಥಳಾಂತರಿಸಿದ ಪೊಲೀಸರು...
ಶಾಮನೂರು ರಸ್ತೆಯಲ್ಲಿ ಅಪಘಾತಕ್ಕೀಡಾಗಿದ್ದ ಶಾಸಕ ಎಸ್. ಎ. ರವೀಂದ್ರನಾಥ್ ಮೊಮ್ಮಗ ಪ್ರಯಾಣಿಸುತ್ತಿದ್ದ ಕಾರನ್ನು ತೆಗೆದುಕೊಂಡು ಹೋಗಲು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದೆ.
ಕಾರು ತೆಗೆಯಲು ಬಿಡದ ಸ್ಥಳೀಯರು
ಶಾಸಕರ ಸಂಬಂಧಿ ಕಾರು ತೆಗೆದುಕೊಂಡು ಹೋಗಲು ಬಂದಿದ್ದು, ಈ ವೇಳೆ ಇದಕ್ಕೆ ಅವಕಾಶ ನೀಡಿಲ್ಲ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.
ಶಾಸಕರ ಪಾಸ್ ಇರುವ ಕಾರಣ ಸ್ಥಳಕ್ಕೆ ಶಾಸಕ ಎಸ್. ಎ. ರವೀಂದ್ರನಾಥ್ ಆಗಮಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪರದಾಡಿದರು. ಕೊನೆಗೆ ಮನೆ ಮಾಲೀಕನ ಮನವೊಲಿಸಿ ಕಾರು ಸ್ಥಳಾಂತರಕ್ಕೆ ಕ್ರಮ ಕೈಗೊಂಡರು.