ಕರ್ನಾಟಕ

karnataka

ETV Bharat / state

ದಾವಣಗೆರೆ ಜಿಲ್ಲಾ ತಂಬಾಕು ನಿಯಂತ್ರಣ ತಂಡದಿಂದ ದಾಳಿ - tobacco attack latest news

ದಾವಣಗೆರೆ ನಗರದ ಬಸವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಆರ್.ಮಾರ್ಕೆಟ್ ಸುತ್ತಮುತ್ತಲಿನ ವಿವಿಧೆಡೆ ಜಿಲ್ಲಾ ತಂಬಾಕು ನಿಯಂತ್ರಣ ತಂಡ ದಾಳಿ ಮಾಡಿತು.

Tobacco attack by Davangere District Tobacco Control Team
ದಾವಣಗೆರೆ ಜಿಲ್ಲಾ ತಂಬಾಕು ನಿಯಂತ್ರಣ ತಂಡದಿಂದ ತಂಬಾಕು ದಾಳಿ

By

Published : Dec 18, 2019, 11:09 PM IST

ದಾವಣಗೆರೆ: ಡಿ.17 ರಂದು ದಾವಣಗೆರೆ ನಗರದ ಬಸವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಆರ್.ಮಾರ್ಕೆಟ್ ಸುತ್ತಮುತ್ತಲಿನ ವಿವಿಧೆಡೆ ಜಿಲ್ಲಾ ತಂಬಾಕು ನಿಯಂತ್ರಣ ತಂಡದಿಂದ ದಾಳಿ ನಡೆಸಲಾಯಿತು.

ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಠಾನ ಜಿಲ್ಲೆ ಎಂದು ಘೋಷಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಈ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.

ದಾವಣಗೆರೆ ಜಿಲ್ಲಾ ತಂಬಾಕು ನಿಯಂತ್ರಣ ತಂಡದಿಂದ ತಂಬಾಕು ದಾಳಿ

ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಬಸವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಆರ್.ಮಾರ್ಕೆಟ್ ಸುತ್ತಮುತ್ತಲಿನ ಹೊಟೇಲ್, ಬಾರ್ & ರೆಸ್ಟೋರೆಂಟ್, ಪಾನ್‍ಶಾಪ್ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಲಾಯಿತು. ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4ರಡಿ 19, ಸೆಕ್ಷನ್ 6ಬಿ 01 ಪ್ರಕರಣ ಹಾಗೂ ಸೆಕ್ಷನ್ 6ಎ ಅಡಿಯಲ್ಲಿ 06 ಪ್ರಕರಣ ಸೇರಿದಂತೆ ಒಟ್ಟು 26 ಪ್ರಕರಣಗಳನ್ನು ದಾಖಲಿಸಿ, 3,050 ರೂ. ದಂಡವನ್ನು ಸಂಗ್ರಹಿಸಲಾಯಿತು.

ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರು ಧೂಮಪಾನ ನಿಷೇಧದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಲಾಯಿತು. ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿನ್ಹೆ ಇಲ್ಲದೆ ಮಾರಾಟ ಮಾಡುವುದಕ್ಕೆ ನಿಷೇಧ ಇರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.

ತಂಬಾಕು ನಿಯಂತ್ರಣ ತಂಡದಲ್ಲಿ ಬಸವನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ನಾಗರಾಜ.ಜಿ, ಹಿರಿಯ ಆರೋಗ್ಯ ಸಹಾಯಕ ವೆಂಕಟಾಚಲಕುಮಾರ್, ಜಿಲ್ಲಾ ಸಲಹೆಗಾರರಾದ ಸತೀಶ ಕಲಹಾಳ, ಸಮಾಜ ಕಾರ್ಯಕರ್ತರಾದ ದೇವರಾಜ ಕೆ.ಪಿ, ಮಹಾನಗರಪಾಲಿಕೆಯ ಆರೋಗ್ಯ ನಿರೀಕ್ಷಕರಾದ ಶ್ರೀಧರ್​ನಾಯ್ಕ, ಬಸವನಗರ ಪೊಲೀಸ್ ಠಾಣೆಯ ಎಎಸ್‍ಐ ಸತೀಶಬಾಬು ಹಾಗೂ ಪೊಲೀಸ್ ಸಿಬ್ಬಂದಿ ಸೇರಿದಂತೆ ಇತರರಿದ್ದರು.

ABOUT THE AUTHOR

...view details