ಕರ್ನಾಟಕ

karnataka

ETV Bharat / state

ಜಾತ್ರೆಗೆ ಬಂದ ಬಾಲಕರಿಬ್ಬರು ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವು

‌ಮೃತ ಬಾಲಕರು ಪೋಷಕರೊಂದಿಗೆ ಉಕ್ಕಡಗಾತ್ರಿಯ ಅಜ್ಜಯ್ಯನ‌ ರಥೋತ್ಸವಕ್ಕೆ ಬಂದಿದ್ದರು. ಈ ವೇಳೆ ನದಿಯಲ್ಲಿ ಈಜಲು ಹೋದಾಗ ಮೃತಪಟ್ಟಿದ್ದಾರೆ. ಬಳಿಕ ಈಜು ತಜ್ಞರು ನದಿಗೆ ಇಳಿದು ಬಾಲಕರ ಶವವನ್ನ ಹೊರ ತೆಗೆದಿದ್ದಾರೆ..

By

Published : Mar 16, 2021, 3:43 PM IST

-tungabhadra-river-harihara
ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವು

ದಾವಣಗೆರೆ :ಜಾತ್ರೆಗೆ ಬಂದಿದ್ದ ಬಾಲಕರಿಬ್ಬರು ತುಂಗಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹರಿಹರ ತಾಲೂಕಿನ ಉಕ್ಕಡಗಾತ್ರಿಯಲ್ಲಿ ನಡೆದಿದೆ.

ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವು

ಓದಿ: ‘ಯಾವ ಕ್ರೀಡೆ ಅಂತ ಬಿಡಿಸಿ ಹೇಳ್ರಿ’: ವಿಧಾನಸಭೆ ಕಲಾಪದಲ್ಲಿ ಸಿಡಿಯದ್ದೇ ಹಾಸ್ಯ

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಉಕ್ಕಡಗಾತ್ರಿ ಗ್ರಾಮದ ಬಳಿಯ ತುಂಗಭದ್ರ ನದಿಯಲ್ಲಿ ಈ ಘಟನೆ ನಡೆದಿದೆ. ಚನ್ನಗಿರಿ ತಾಲೂಕಿನ ಮಾಳನಾಯಕನಹಟ್ಟಿ ನಿವಾಸಿ 12 ವರ್ಷದ ಅಜ್ಜಯ್ಯ ಹಾಗೂ ಆಂಧ್ರದ ಕಲ್ಯಾಣದುರ್ಗದ 14 ವರ್ಷದ ನವೀನ್‌ ಕುಮಾರ್‌ ಮೃತಪಟ್ಟ ಬಾಲಕರು ಎಂದು ಗುರುತಿಸಲಾಗಿದೆ.

ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವು

‌ಮೃತ ಬಾಲಕರು ಪೋಷಕರೊಂದಿಗೆ ಉಕ್ಕಡಗಾತ್ರಿಯ ಅಜ್ಜಯ್ಯನ‌ ರಥೋತ್ಸವಕ್ಕೆ ಬಂದಿದ್ದರು. ಈ ವೇಳೆ ನದಿಯಲ್ಲಿ ಈಜಲು ಹೋದಾಗ ಮೃತಪಟ್ಟಿದ್ದಾರೆ. ಬಳಿಕ ಈಜು ತಜ್ಞರು ನದಿಗೆ ಇಳಿದು ಬಾಲಕರ ಶವವನ್ನ ಹೊರ ತೆಗೆದಿದ್ದಾರೆ. ಈ ಸಂಬಂಧ ಮಲೇಬೆನ್ನೂರು‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವು

ABOUT THE AUTHOR

...view details