ಕರ್ನಾಟಕ

karnataka

By

Published : Jul 29, 2021, 5:17 PM IST

ETV Bharat / state

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯ ಕುತ್ತಿಗೆ ಹಿಸುಕಿ ಕೊಂದ ಪತ್ನಿ

ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯೋರ್ವಳು ಪ್ರಿಯಕರನ ಜೊತೆ ಸೇರಿ ಗಂಡನನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

wife kills her husaband in davanagere
ಪ್ರಿಯತಮನೊಂದಿಗೆ ಸೇರಿ ಪತಿಯ ಕೊಲೆ

ದಾವಣಗೆರೆ:ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಪ್ರಕರಣ ಜಿಲ್ಲೆಯ ಚನ್ನಗಿರಿ ತಾಲೂಕಿನ ವಡ್ನಾಳ್ ಬನ್ನಿಹಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಗಂಡನನ್ನೇ ಕೊಂದು ತನಗೆ ಏನೂ ಗೊತ್ತೇ ಇಲ್ಲ ಎಂಬಂತೆ ವರ್ತಿಸುತ್ತಿದ್ದ ಕೊಲೆಗಾತಿ ಪತ್ನಿ ಹಾಗು ಪ್ರಿಯಕರ ಇಬ್ಬರೂ ಇದೀಗ ಕಂಬಿ ಎಣಿಸುತ್ತಿದ್ದಾರೆ.

ವಡ್ನಾಳ್ ಬನ್ನಿಹಟ್ಟಿ ಗ್ರಾಮದ ನಿವಾಸಿ ಲೋಕೇಶಪ್ಪ (38) ಕೊಲೆಯಾದವ. ಪತ್ನಿ ಕುಸುಮ (30), ಪ್ರಿಯಕರ ಪ್ರಭು ಲಿಂಗಪ್ಪ (35) ಬಂಧಿತ ಆರೋಪಿಗಳು. ಆರೋಪಿ ಪತ್ನಿಯ ಪ್ರಿಯಕರ ಪ್ರಭು ಲಿಂಗಪ್ಪ, ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ನಿವಾಸಿಯಾಗಿದ್ದು, ಕುಸುಮಳೊಂದಿಗೆ ಅಕ್ರಮಸಂಬಂಧ ಇಟ್ಟುಕೊಂಡಿದ್ದನಂತೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಲೋಕೇಶಪ್ಪನನ್ನು ಇಬ್ಬರು ಸೇರಿ ಕತ್ತು ಹಿಸುಕಿ ಕಳೆದ 27ರ ತಡರಾತ್ರಿ ಮನೆಯಲ್ಲೇ ಕೊಲೆ‌ ಮಾಡಿದ್ದರು ಎಂದು ತಿಳಿದು ಬಂದಿದೆ.

ಪತ್ನಿ ಕುಸುಮಳನ್ನು ಪೊಲೀಸರು ವಿಚಾರಣೆ ನಡೆಸಿದಾಗ ಕುಸುಮ ಹಾಗೂ ಪ್ರಭು ಕೊಲೆ ಮಾಡಿರುವ ಮಾಹಿತಿ ಹೊರಬಿದ್ದಿದೆ. ಇದೀಗ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದು, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೇರೆಯಾಗಿದ್ದ ದಂಪತಿ:

ಮೃತ ಲೋಕೇಶಪ್ಪ ಹಾಗು ಆರೋಪಿ ಪತ್ನಿ ಕುಸುಮ‌ ಇಬ್ಬರ ನಡುವೆ ಸಾಕಷ್ಟು ಬಾರಿ ಗಲಾಟೆಯಾಗಿತ್ತಂತೆ. ಗ್ರಾಮಸ್ಥರು ರಾಜೀ ಪಂಚಾಯಿತಿ ಮಾಡಿದ್ರೂ ಪ್ರಯೋಜನ ಆಗಿರಲಿಲ್ಲ. ಈ ಮಧ್ಯೆ ಕುಸುಮ ಪ್ರಭು ಎಂಬತಾನೊಂದಿಗೆ ಅಕ್ರಮಸಂಬಂಧ ಬೆಳೆಸಿಕೊಂಡಿದ್ದಳಂತೆ. ಹೀಗಾಗಿ ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಲೋಕೇಶಪ್ಪನನ್ನು ಕತ್ತು ಹಿಸುಕಿ ಇಬ್ಬರೂ ಕೊಲೆಗೈದಿದ್ದಾರೆ.

ABOUT THE AUTHOR

...view details