ಕರ್ನಾಟಕ

karnataka

ಭೂಸುಧಾರಣಾ ಕಾಯ್ದೆ ವಿರೋಧಿಸಿ ಸರಕಾರಕ್ಕೆ ಮನವಿ

By

Published : Aug 11, 2020, 1:05 PM IST

ರಾಜ್ಯ ಸರ್ಕಾರ ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಕರ್ನಾಟಕ ರಾಜ್ಯ ಹಸಿರು ಸೇನೆ ಹಾಗೂ ರೈತ ಸಂಘದಿಂದ ಸರಕಾರಕ್ಕೆ ಮನವಿ ನೀಡಲಾಯಿತು.

Kalaghatagi
Kalaghatagi

ಕಲಘಟಗಿ:ರಾಜ್ಯ ಸರ್ಕಾರ ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಕರ್ನಾಟಕ ರಾಜ್ಯ ಹಸಿರು ಸೇನೆ ಹಾಗೂ ರೈತ ಸಂಘದಿಂದ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯ ಸರ್ಕಾರ ಜಾರಿಗೆ ತಂದ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರೈತ ವಿರೋಧಿ ಕಾಯ್ದೆಯಾಗಿದ್ದು, ಇದನ್ನು ರದ್ದು ಪಡಿಸಬೇಕು ಎಂದು‌ ಒತ್ತಾಯಿಸಲಾಯಿತು.

ನಮ್ಮ ಭೂಮಿ ಮಾರಾಟಕ್ಕಿಲ್ಲ ಎಂಬ ಘೋಷವಾಕ್ಯದೊಂದಿಗೆ ಕಾಯ್ದೆ ವಿರೋಧಿಸಲಾಯಿತು. ಜಿಲ್ಲಾ ಅಧ್ಯಕ್ಷ ಕಲ್ಮೇಶ ಲಿಗಾಡೆ, ಶಿವಾನಂದ ಸಿಂದೋಗಿ ಹಾಗೂ ರೈತರು ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಪಡಿಸಬೇಕು ಎಂದು ತಹಶೀಲ್ದಾರ್​‌ ಅಶೋಕ ಶಿಗ್ಗಾವಿ ಅವರಿಗೆ ಮನವಿ ನೀಡಿದರು.

ABOUT THE AUTHOR

...view details