ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ: ಗುಡಗೇರಿ ಠಾಣೆಯ ಎಎಸ್​ಐ ಆತ್ಮಹತ್ಯೆ - ವಿಷ ಸೇವಿಸಿ ಆತ್ಮಹತ್ಯೆ

ASI Suicide in Hubli: ಎಎಸ್​ಐ ಬಸವರಾಜ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ.

ASI Basavaraja Shantaveerappa Payannavara
ಎಎಸ್​ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ

By ETV Bharat Karnataka Team

Published : Nov 8, 2023, 3:15 PM IST

ಹುಬ್ಬಳ್ಳಿ:ಎಎಸ್ಐ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ನಡೆದಿದೆ. ಗುಡಗೇರಿ ಪೊಲೀಸ್ ಠಾಣೆಯ ಎಎಸ್​ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಆತ್ಮಹತ್ಯೆ ಮಾಡಿಕೊಂಡ ಎಎಸ್ಐ ಆಗಿದ್ದಾರೆ.

ರಾತ್ರಿ ಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದ ಬಸವರಾಜ, ವಸತಿ ಗೃಹದ ಆವರಣದಲ್ಲಿ ದೇಗುಲದ ಬಳಿ ಮಲಗಿದ್ದರು. ಕುಟುಂಬಸ್ಥರು ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ತಕ್ಷಣ ಕುಟುಂಬಸ್ಥರು ಅವರನ್ನು ಲಕ್ಷೇಶ್ವರ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟೊತ್ತಿಗಾಗಲೇ ಬಸವರಾಜ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಎಎಸ್‌ಐ ಬಸವರಾಜ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗಗೊಂಡಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಎಎಸ್​ಐ ಕೆಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತ ಬಸವರಾಜ ಅವರು ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಶಾಂತಗಿರಿ ಗ್ರಾಮದವರು. ಪತ್ನಿ ಮತ್ತು ಮೂವರು ಮಕ್ಕಳು ಇದ್ದಾರೆ. ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಮಡಿಕೇರಿ: ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ

ABOUT THE AUTHOR

...view details