ಕರ್ನಾಟಕ

karnataka

ETV Bharat / state

ಅಬಕಾರಿ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಜನ ಜಾಗೃತಿ ಕಾರ್ಯಕ್ರಮ‌ - ಅಬಕಾರಿ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಜನ ಜಾಗೃತಿ ಕಾರ್ಯಕ್ರಮ‌

ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ನವಲಗುಂದ ತಾಲೂಕುಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ರಸ್ತೆಗೆ ಇಳಿದು ಕೋವಿಡ್-19 ಹರಡುವುದನ್ನು ತಪ್ಪಿಸುವುದಕ್ಕಾಗಿ ಜಾಗೃತಿ ಮೂಡಿಸಿದರು.

Department of Excise
ಅಬಕಾರಿ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಜನ ಜಾಗೃತಿ ಕಾರ್ಯಕ್ರಮ‌

By

Published : Jul 16, 2020, 10:16 PM IST

ಹುಬ್ಬಳ್ಳಿ:ಧಾರವಾಡ ಜಿಲ್ಲೆಯಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ಹರಡುವಿಕೆ ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಲಾಕ್​ಡೌನ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗದ ಕುರಿತು ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಅಬಕಾರಿ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ನವಲಗುಂದ ತಾಲೂಕುಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ರಸ್ತೆಗೆ ಇಳಿದು ಕೊವಿಡ್-19 ಹರಡುವುದನ್ನು ತಪ್ಪಿಸುವುದಕ್ಕಾಗಿ, ಕಡ್ಡಾಯ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಪಾನ್ ಬೀಡಾ, ಗುಟ್ಕಾ ಅಗೆದು ಸಾರ್ವಜನಿಕವಾಗಿ ಉಗುಳದಿರುವುದು‌. ಗುಂಪು ಗುಂಪಾಗಿ ಒಂದಡೆ ಸೇರದಿರುವಂತೆ, ಸ್ಯಾನಿಟೈಜರ್ ಅಥವಾ ಸೋಪಿನಿಂದ ಪದೇ ಪದೇ ಕೈ ಸ್ವಚ್ಛಗೊಳಿಸುವ ಕುರಿತು ಜನ ಜಾಗೃತಿಯನ್ನು ಮೂಡಿಸಿದರು. ಅಗತ್ಯ ಸೇವೆಗಳನ್ನು ಒದಗಿಸುವ ಅಂಗಡಿ, ಮನೆಗಳಿಗೆ ತೆರಳಿದ ಅಧಿಕಾರಿಗಳು ಜನರಿಗೆ ಇವುಗಳ ಮಹತ್ವ ತಿಳಿಸಿದರು.

ನೂಲ್ವಿ ಗ್ರಾಮದ ಕೆ.ಬಿ.ಡಿ. ಡಿಸ್ಟಲರಿ ಲಿಕ್ವಿಡ್ ಪ್ಯಾಕ್ಟರಿಗೆ ಭೇಟಿ ನೀಡಿದ ಅಬಕಾರಿ ಉಪ ಆಯುಕ್ತ ಶಿವನಗೌಡರ ನೇತೃತ್ವದ ತಂಡ, ಕಾರ್ಖಾನೆಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಬಳಕೆ, ಥರ್ಮಲ್ ಸ್ಕ್ಯಾನಿಂಗ್, ಪಲ್ಸ್ ಆಕ್ಸಿ ಮೀಟರ್ ಉಪಯೋಗಿಸುವ ಕುರಿತು ಪರಿಶೀಲಿಸಿ ನಡೆಸಿ, ಸಾಮಾಜಿಕ ಅಂತರದೊಂದಿಗೆ ಕರ್ತವ್ಯ ನಿರ್ವಹಿಸುವಂತೆ ಕಾರ್ಮಿಕರಿಗೆ ತಿಳಿ ಹೇಳಿದರು.

ಧಾರವಾಡದಲ್ಲಿ ಅಬಕಾರಿ ಉಪನಿರೀಕ್ಷಕ ಎಸ್.ಎಸ್.ಮುಜಾವರ್​, ಹುಬ್ಬಳ್ಳಿಯಲ್ಲಿ ಅಬಕಾರಿ ಉಪನಿರೀಕ್ಷಕ ಶ್ರೀಶೈಲ ಸಂಗೊಳ್ಳಿ, ನವಲಗುಂದಲ್ಲಿ ಅಬಕಾರಿ ಉಪನಿರೀಕ್ಷಕ ಟಿ.ಜೆ. ಗುಂಜೀಕರ, ಕುಂದಗೋಳದಲ್ಲಿ ಅಬಕಾರಿ ಉಪನಿರೀಕ್ಷಕ ಪ್ರೇಮಸಿಂಗ್ ಲಮಾಣಿ, ಕಲಘಟಗಿಯಲ್ಲಿ ಅಬಕಾರಿ ಉಪನಿರೀಕ್ಷಕ ಜಿ.ಬಿ.ಗುಲೆ ನೇತೃತ್ವದಲ್ಲಿ ಜನಜಾಗೃತಿ ಕಾರ್ಯಕ್ರಗಳು ಜರುಗಿದವು.

ABOUT THE AUTHOR

...view details