ಬಂಟ್ವಾಳ(ದಕ್ಷಿಣ ಕನ್ನಡ):ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಅನಗತ್ಯವಾಗಿ ಮನೆಯಿಂದ ಹೊರ ಹೋಗದೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕ್ಷೇತ್ರದ ಜನತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮನವಿ ಮಾಡಿದ್ದಾರೆ.
ನಿಯಮ ಪಾಲಿಸಿ ಕೊರೊನಾ ಹರಡುವಿಕೆ ತಡೆಯುವಂತೆ ಬಂಟ್ವಾಳ ಶಾಸಕ ಮನವಿ
ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಅನಗತ್ಯವಾಗಿ ಮನೆಯಿಂದ ಹೊರ ಹೋಗದೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕ್ಷೇತ್ರದ ಜನತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮನವಿ ಮಾಡಿದ್ದಾರೆ.
ನಿಯಮ ಪಾಲಿಸಿ ಕೊರೊನಾ ಹರಡಯವಿಕೆ ತಡೆಯುವಂತೆ ಬಂಟ್ವಾಳ ಶಾಸಕ ಮನವಿ
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಮತ್ತು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಮಿತಿ ಮೀರಿ ಹರಡುತ್ತಿರುವುದರಿಂದ ಯಾವುದೇ ಕಾರಣಕ್ಕೂ ಅನಗತ್ಯವಾಗಿ ತಿರುಗಾಟ ಬೇಡ. ಮಾಸ್ಕ್ ಧರಿಸದೆ ಮನೆಯಿಂದ ಹೊರ ಹೋಗಬೇಡಿ. ಮನೆಯಲ್ಲಿರುವ ಚಿಕ್ಕ ಮಕ್ಕಳು ಹಾಗೂ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿ ವಹಿಸಿ. ಆರೋಗ್ಯದ ಸಮಸ್ಯೆ ಕಂಡು ಬಂದಲ್ಲಿ ಕೂಡಲೇ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ. ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿ ಎಂದು ಹೇಳಿದ್ದಾರೆ.