ಹುಬ್ಬಳ್ಳಿ:ವಿಶ್ವವನ್ನ ತಲ್ಲಣಗೊಳಿಸಿರುವ ಕೋವಿಡ್-19 ವಿರುದ್ಧ ವೈದ್ಯರು ತಮ್ಮ ಜೀವದ ಹಂಗು ತೊರೆದು ಚಿಕಿತ್ಸೆ ನೀಡುತ್ತಿದ್ದಾರೆ. ಇಂತಹ ಕೊರೊನಾ ವಾರಿಯರ್ಸ್ಗೆ ಎಸ್.ವಿ.ಬಿ.ಡಂಗನವರ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಿಮ್ಸ್ ವೈದ್ಯಾಧಿಕಾರಿಗಳಿಗೆ ಸನ್ಮಾನ ಮಾಡುವ ಮೂಲಕ ಬಸವ ಜಯಂತಿ ಆಚರಣೆ - kims hospital latest news
ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಎಸ್.ವಿ.ಬಿ.ಡಂಗನವರ ಪ್ರತಿಷ್ಠಾನದಿಂದ ವೈದರಿಗೆ ಬಸವ ಜಯಂತಿ ಪ್ರಯುಕ್ತ ಗೌರವ ಸಲ್ಲಿಸುವ ಮೂಲಕ ವಿಶೇಷವಾಗಿ ಬಸವ ಜಯಂತಿ ಆಚರಿಸಲಾಯಿತು.
![ಕಿಮ್ಸ್ ವೈದ್ಯಾಧಿಕಾರಿಗಳಿಗೆ ಸನ್ಮಾನ ಮಾಡುವ ಮೂಲಕ ಬಸವ ಜಯಂತಿ ಆಚರಣೆ basava-jayanti](https://etvbharatimages.akamaized.net/etvbharat/prod-images/768-512-6949075-161-6949075-1587897984581.jpg)
ಕಿಮ್ಸ್ ವೈದ್ಯಾಧಿಕಾರಿಗಳಿಗೆ ಸನ್ಮಾನ
ಜಿಲ್ಲೆಯಲ್ಲಿ 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡದ ಉತ್ತಮ ಚಿಕಿತ್ಸೆಯಿಂದ ಇಬ್ಬರು ಸೋಂಕಿತರು ಗುಣಮುಖರಾಗಿದ್ದು, ಉಳಿದವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ಕಿಮ್ಸ್ ವೈದ್ಯಾಧಿಕಾರಿಗಳಿಗೆ ಸನ್ಮಾನ
ಕಿಮ್ಸ್ ನಿರ್ದೆಶಕ ಡಾ. ರಾಮಲಿಂಗಪ್ಪ, ಕಿಮ್ಸ್ ಅಧಿಕ್ಷಕ ಅರುಣಕುಮಾರ್ ಅವರನ್ನೊಳಗೊಂಡ ವೈದ್ಯರ ತಂಡಕ್ಕೆ ಶಾಲು, ಪೇಟಾ ತೊಡಿಸಿ, ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಿ ಅಭಿನಂದನೆ ಸಲ್ಲಿಸಲಾಯಿತು.