ಕರ್ನಾಟಕ

karnataka

By

Published : Apr 3, 2022, 4:03 PM IST

Updated : Apr 3, 2022, 7:21 PM IST

ETV Bharat / state

ನಾನು ಬಿಜೆಪಿ ಸೇರುವುದು ಖಚಿತ, ಈಗಾಗಲೇ ವರಿಷ್ಠರ ಜೊತೆ ಮಾತುಕತೆಯಾಗಿದೆ: ಹೊರಟ್ಟಿ

ಬಿಜೆಪಿ ಸೇರ್ಪಡೆಗೆ ಆ ಪಕ್ಷದ ಕೆಲವರಿಂದ ವಿರೋಧವಿದೆಯಲ್ಲ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಹೊರಟ್ಟಿ, 'ಯಾರು ವಿರೋಧ ಮಾಡುತ್ತಿದ್ದಾರೆ ಎಂಬುದು ನನಗೆ ಬೇಕಾಗಿಲ್ಲ. ಶನಿವಾರ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ'. ಅಲ್ಲದೇ, ಬಿಜೆಪಿಯಿಂದ ಸ್ಪರ್ಧೆಗೆ ಹೆಚ್. ಡಿ. ಕುಮಾರಸ್ವಾಮಿ ಅವರೂ ಕೂಡಾ ಮುಕ್ತವಾಗಿ ಒಪ್ಪಿದ್ದಾರೆ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಈವರೆಗೆ ಜೆಡಿಎಸ್​ನಲ್ಲಿದ್ದು ರಾಜಕೀಯದಲ್ಲಿ ಬೆಳೆದಿರುವ ಬಸವರಾಜ್ ಹೊರಟ್ಟಿ ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳಿಗೆ ಕೊನೆಗೂ ಉತ್ತರ ಸಿಕ್ಕಿದೆ. ನಾನು ಬಿಜೆಪಿ ಸೇರುವುದು ಖಚಿತ. ಈಗಾಗಲೇ ಈ ಬಗ್ಗೆ ಬಿಜೆಪಿ ವರಿಷ್ಠರ ಜೊತೆ ಮಾತುಕತೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.

ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದ್ದಾರೆ

ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತೇನೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದರು. ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಅವರು ತಿಳಿಸಿದರು.

ಬಿಜೆಪಿ ಸೇರ್ಪಡೆಗೆ ಆ ಪಕ್ಷದ ಕೆಲವರಿಂದ ವಿರೋಧವಿದೆಯಲ್ಲ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 'ಯಾರು ವಿರೋಧ ಮಾಡುತ್ತಿದ್ದಾರೆ ಎಂಬುದು ನನಗೆ ಬೇಕಾಗಿಲ್ಲ. ಶನಿವಾರ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ'. ಅಲ್ಲದೇ, ಬಿಜೆಪಿಯಿಂದ ಸ್ಪರ್ಧೆಗೆ ಹೆಚ್. ಡಿ. ಕುಮಾರಸ್ವಾಮಿ ಅವರೂ ಕೂಡಾ ಮುಕ್ತವಾಗಿ ಒಪ್ಪಿದ್ದಾರೆ. ಬಿಜೆಪಿ ಸೇರ್ಪಡೆಗೆ ಕರ್ನಾಟಕದ ಎಲ್ಲಾ ನಾಯಕರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಓದಿ:ಹಲಾಲ್ ಕಟ್ ವಿವಾದದಲ್ಲಿ ಬಿಜೆಪಿ ಒಂದೇ ಸಮಾಜವನ್ನು ಗುರಿಯಾಗಿಸಿದೆ: ತಮಟಗಾರ ಆರೋಪ

Last Updated : Apr 3, 2022, 7:21 PM IST

For All Latest Updates

TAGGED:

ABOUT THE AUTHOR

...view details