ಕರ್ನಾಟಕ

karnataka

By

Published : Dec 12, 2019, 3:00 PM IST

ETV Bharat / state

ಟ್ರ್ಯಾಕ್ಟರ್​ಗೆ ಡಿಕ್ಕಿ: ಬೈಕ್​​​ ಸವಾರ ಸ್ಥಳದಲ್ಲೇ ಸಾವು

ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ಟ್ರ್ಯಾಕ್ಟರ್​ ಮತ್ತು ದ್ವಿಚಕ್ರ​ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

bike-and-tractor-accident-in-dharwad
ಮೃತ ಸೈಯದ್​ ರೆಹಮಾನ್

ಧಾರವಾಡ:ಕಬ್ಬಿನ್ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ನಡೆದಿದೆ.

ಮೃತ ಸೈಯದ್​ ರೆಹಮಾನ್

ಕಲಘಟಗಿ ತಾಲೂಕಿನ ಹುಲಕೊಪ್ಪ ಗ್ರಾಮದ ಯುವಕ ಸೈಯದ್ ರೆಹಮಾನ್ ಬಳಿಗೇರ ಮೃತ ದುರ್ದೈವಿಯಾಗಿದ್ದಾನೆ. ಹುಲಕೊಪ್ಪ ಗ್ರಾಮದಿಂದ ಧಾರವಾಡದ ಕಡೆಗೆ ಹೊರಟಿದ್ದ ವೇಳೆ ಈ ದುರ್ಘಟನೆ‌ ಸಂಭವಿಸಿದೆ.

ಇನ್ನಿಬ್ಬರು ಸವಾರರಿಗೆ ಸಣ್ಣ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

For All Latest Updates

TAGGED:

ABOUT THE AUTHOR

...view details