ಕರ್ನಾಟಕ

karnataka

By

Published : Feb 28, 2021, 4:03 PM IST

ETV Bharat / state

ಹುಬ್ಬಳ್ಳಿಯಲ್ಲಿ ಲಾರಿಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಮೊಬೈಲ್​ನಲ್ಲಿ ಮಾತನಾಡುತ್ತಾ ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಲಾರಿ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಸವಾರ ಸ್ಥಳದಲ್ಲೇ ಸಾವು
man died on the spot at Hubli

ಹುಬ್ಬಳ್ಳಿ:ಮೊಬೈಲ್​ನಲ್ಲಿ ಮಾತನಾಡುತ್ತಾ ಹೊರಟಿದ್ದ ಬೈಕ್​ ಸವಾರ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ನೀಲಪ್ಪ ಮಾದರ ಎಂಬುವರಿಗೆ ಸೇರಿದ ಬೈಕ್​ ತೆಗೆದುಕೊಂಡು ಬಂದಿದ್ದ ವ್ಯಕ್ತಿ ಮೊಬೈಲ್​ನಲ್ಲಿ ಮಾತನಾಡುತ್ತಾ ಬರುತ್ತಿದ್ದನು. ಮಾತನಾಡುವುದರಲ್ಲಿ ಮಗ್ನನಾಗಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಲಾರಿ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.

ಈ ಸಂಬಂಧ ಉಪನಗರ ಪೊಲೀಸ್​ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.

ABOUT THE AUTHOR

...view details