ಕರ್ನಾಟಕ

karnataka

ETV Bharat / state

ಮೋದಿ, ಜೋಶಿ ಗೆಲುವಿಗಾಗಿ ಕಾರ್ಯಕರ್ತರಿಂದ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಹಾಗೂ ಕ್ಷೇತ್ರದ ಸಂಸದರಾದ ಪ್ರಹ್ಲಾದ್ ಜೋಶಿ ಗೆಲುವು ಸಾಧಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ.

By

Published : May 22, 2019, 3:25 PM IST

Dharwad

ಧಾರವಾಡ:ನರೇಂದ್ರ ಮೋದಿ‌ ಮತ್ತೊಮ್ಮೆ ಪ್ರಧಾನಿ ಆಗಬೇಕು ಹಾಗೂ ಸಂಸದ ಪ್ರಹ್ಲಾದ್ ಜೋಶಿ ಗೆಲುವು ಸಾಧಿಸಬೇಕು ಎಂದು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ.

ಮೋದಿ, ಜೋಶಿ ಅವರ ಗೆಲುವಿಗಾಗಿ ವಿಶೇಷ ಪೂಜೆ

ನಗರದ ಐತಿಹಾಸಿಕ ದುರ್ಗಾದೇವಿ ದೇವಸ್ಥಾನದಲ್ಲಿ ಮೋದಿ ಹಾಗೂ ಜೋಶಿ ಮತ್ತೊಮ್ಮೆ ಗೆಲುವು ಸಾಧಿಸಲಿ ಎಂದು ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸಿ ಬಳಿಕ ಮಾತನಾಡಿದ ಕಾರ್ಯಕರ್ತರು, ರಾಷ್ಟ್ರದ ಏಳಿಗೆ ಹಾಗೂ ಭದ್ರತೆಗಾಗಿ ನರೇಂದ್ರ ಮೋದಿಯವರು ಶ್ರಮ ಪಡುತ್ತಿದ್ದಾರೆ. ಹಾಗಾಗಿ ಈ ಬಾರಿ 350ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ನಾವು ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದರು.

ಸತತ ಮೂರು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಜೋಶಿ ಅವರು ಈ ಬಾರಿಯೂ ಗೆಲುವು ಸಾಧಿಸಿ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯಬೇಕು ಎಂದು ನಾವು ಪ್ರಾರ್ಥಿಸಿದ್ದೇವೆ. ನಾಳಿನ ಫಲಿತಾಂಶದಲ್ಲಿ ಎನ್​ಡಿಎ ಹೆಚ್ಚಿನ ಸ್ಥಾನ ಪಡೆಯಬೇಕೆಂಬುದೇ ನಮ್ಮ ಆಶಯವಾಗಿದೆ ಎಂದರು.

For All Latest Updates

TAGGED:

ABOUT THE AUTHOR

...view details