ಕರ್ನಾಟಕ

karnataka

By

Published : Jan 19, 2021, 5:52 PM IST

ETV Bharat / state

ಸಚಿವ ಡಾ. ‌ಸುಧಾಕರ್​ಗೆ ಕಪ್ಪು ಬಟ್ಟೆ ಪ್ರದರ್ಶಿಸಿ ಘೇರಾವ್​ ಹಾಕಿದ ಕರವೇ ಕಾರ್ಯಕರ್ತರು

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಯಾರು ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಅವರ ಬಗ್ಗೆ ಸಚಿವ ಡಾ. ಸುಧಾಕರ್ ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಕರವೇ ಕಾರ್ಯಕರ್ತರು ಸಚಿವರ ಕಾರಿ​ಗೆ ಕಪ್ಪುಬಟ್ಟೆ ಪ್ರದರ್ಶಿಸಿ ಕಿಡಿಕಾರಿದರು.

Black flags shown to minister K. Sudhakar
ಸಚಿವ ಡಾ.‌ಸುಧಾಕರ್ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ ಕರವೇ ಕಾರ್ಯಕರ್ತರ ಆಕ್ರೋಶ

ಹುಬ್ಬಳ್ಳಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಗೆ ಕರವೇ ಕಾರ್ಯಕರ್ತರು ಕಪ್ಪು ಬಟ್ಟೆ ತೋರಿಸಿ, ಘೇರಾವ್ ಹಾಕಿದ ಘಟನೆ ಇಲ್ಲಿನ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ.

ಸಚಿವ ಡಾ.‌ಸುಧಾಕರ್ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ ಕರವೇ ಕಾರ್ಯಕರ್ತರ ಆಕ್ರೋಶ

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಯಾರು ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಅವರ ಬಗ್ಗೆ ಸಚಿವ ಡಾ. ಸುಧಾಕರ್ ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಸಚಿವರಿಗೆ ಕಪ್ಪುಬಟ್ಟೆ ತೋರಿಸಿ ಆಕ್ರೋಶ ವ್ಯಕ್ತಪಡಿಸಿದರು. ‌ಈ ವೇಳೆ ಸಚಿವರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಸಚಿವರ ಜತೆ ವಾಗ್ವಾದಕ್ಕಿಳಿದು ಕಾರಿಗೆ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕೂಡಲೇ ನಾರಾಯಣಗೌಡ ಅವರ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು. ಸದ್ಯ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ABOUT THE AUTHOR

...view details