ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಿಂದ ಉಳವಿ, ಧರ್ಮಸ್ಥಳ, ಇಡಗುಂಜಿಗೆ ಬಸ್ ಸಂಚಾರ ಪುನಾರಂಭ - Bus restarts to dharmasthala

ಸಾರ್ವಜನಿಕರ ಬೇಡಿಕೆಯ ಮೇರೆಗೆ ಹುಬ್ಬಳ್ಳಿಯಿಂದ ಉಳವಿ ಮತ್ತು ಇಡಗುಂಜಿಗೆ ಬೆಳಗ್ಗಿನ ಸಮಯದಲ್ಲಿ ಹಾಗೂ ಧರ್ಮಸ್ಥಳಕ್ಕೆ ಹಗಲು ಮತ್ತು ರಾತ್ರಿ ಸಮಯದಲ್ಲಿ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ ಎಂದು ಹುಬ್ಬಳ್ಳಿ ವಾಯವ್ಯ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡ ತಿಳಿಸಿದ್ದಾರೆ.

bus-restarts-from-hubballi-to-ulavi-dharmasthala-and-idagunji
ಹುಬ್ಬಳ್ಳಿಯಿಂದ ಬಸ್​ ಸಂಚಾರ ಆರಂಭ

By

Published : Aug 20, 2021, 5:56 PM IST

ಹುಬ್ಬಳ್ಳಿ: ಲಾಕ್​ಡೌನ್​ನಿಂದ ಬಸ್​ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇದೀಗ ಅನ್​ಲಾಕ್​ ಘೋಷಣೆಯಾಗಿರುವುದರಿಂದ ಉಳವಿ, ಧರ್ಮಸ್ಥಳ, ಇಡಗುಂಜಿ ಮತ್ತಿತರ ಧಾರ್ಮಿಕ ಸ್ಥಳಗಳಿಗೆ ಪುನಃ ಸಂಚಾರ ಆರಂಭಿಸಲಾಗಿದೆ ಎಂದು ಹುಬ್ಬಳ್ಳಿ ವಾಯವ್ಯ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡ ತಿಳಿಸಿದ್ದಾರೆ.

ಕೋವಿಡ್ 2ನೇ ಅಲೆ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿತ್ತು. ಅದರಂತೆ ಧಾರ್ಮಿಕ ಕ್ಷೇತ್ರಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಹೀಗಾಗಿ, ಈ ಕ್ಷೇತ್ರಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇತ್ತೀಚೆಗೆ ನಿರ್ಬಂಧಗಳ ಸಡಿಲಿಕೆ ಮಾಡಿದ್ದು, ಧಾರ್ಮಿಕ ಕ್ಷೇತ್ರಗಳಿಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತ್ತು ಪ್ರಸ್ತುತ ಶ್ರಾವಣ ಮಾಸದ ಪ್ರಯುಕ್ತ ಧಾರ್ಮಿಕ ಕ್ಷೇತ್ರಗಳಿಗೆ ಜನರ ಸಂಚಾರ ಹೆಚ್ಚಾಗಿದೆ.

ಮತ್ತೆ ರಾತ್ರಿ ಸಂಚಾರ ಆರಂಭ

ಆದ್ದರಿಂದ, ಸಾರ್ವಜನಿಕರ ಬೇಡಿಕೆಯ ಮೇರೆಗೆ ಹುಬ್ಬಳ್ಳಿಯಿಂದ ಉಳವಿ ಮತ್ತು ಇಡಗುಂಜಿಗೆ ಬೆಳಗ್ಗಿನ ಸಮಯದಲ್ಲಿ ಹಾಗೂ ಧರ್ಮಸ್ಥಳಕ್ಕೆ ಹಗಲು ಮತ್ತು ರಾತ್ರಿ ಸಮಯದಲ್ಲಿ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಈ ಬಸ್​ಗಳು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ.

ಉಳವಿಗೆ ತೆರಳುವ ಬಸ್ ಬೆಳಗ್ಗೆ 8-15ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತದೆ. ಉಳವಿಗೆ ಮಧ್ಯಾಹ್ನ12-15 ಕ್ಕೆ ತಲುಪುತ್ತದೆ. ಅಲ್ಲಿಂದ ಮಧ್ಯಾಹ್ನ 2 ಕ್ಕೆ ಬಿಟ್ಟು ಹುಬ್ಬಳ್ಳಿಗೆ ಸಂಜೆ 6ಕ್ಕೆ ಆಗಮಿಸುತ್ತದೆ. ಇಡಗುಂಜಿಗೆ ಹೋಗುವ ಬಸ್ ಬೆಳಗ್ಗೆ 7ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತದೆ. 12ಕ್ಕೆ ಇಡಗುಂಜಿ ತಲುಪುತ್ತದೆ. ಅಲ್ಲಿಂದ ಮಧ್ಯಾಹ್ನ 2ಕ್ಕೆ ಬಿಟ್ಟು ಸಂಜೆ 7ಕ್ಕೆ ನಗರಕ್ಕೆ ಆಗಮಿಸುತ್ತದೆ.

ಬೆಳಗ್ಗೆ 6ಕ್ಕೆ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಬಸ್​ ಸೇವೆ

ಧರ್ಮಸ್ಥಳಕ್ಕೆ ಹೋಗುವ ಹಗಲು ಬಸ್ ಬೆಳಗ್ಗೆ 6ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತದೆ‌. ಸಂಜೆ 5-30ಕ್ಕೆ ಧರ್ಮಸ್ಥಳ ತಲುಪುತ್ತದೆ. ಮರುದಿನ ಬೆಳಗ್ಗೆ 5-30ಕ್ಕೆ ಅಲ್ಲಿಂದ ಬಿಟ್ಟು ಸಂಜೆ 4ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತದೆ. ರಾತ್ರಿ ಸಾರಿಗೆ ಬಸ್ ಸಂಜೆ 6ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತದೆ. ಮರುದಿನ ಬೆಳಗ್ಗೆ 5ಕ್ಕೆ ಧರ್ಮಸ್ಥಳ ತಲುಪುತ್ತದೆ. ಸಂಜೆ 6-15ಕ್ಕೆ ಅಲ್ಲಿಂದ ಬಿಟ್ಟು ಮರುದಿನ ಬೆಳಗ್ಗೆ 5-15ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತದೆ.

ಮತ್ತಷ್ಟು ಧಾರ್ಮಿಕ ಸ್ಥಳಗಳಿಗೆ ಬಸ್ ಸಂಚಾರ : ದಕ್ಷಿಣ ಕನ್ನಡ ಜಿಲ್ಲಾಡಳಿತದ ನಿರ್ದೇಶನಗಳ ಪ್ರಕಾರ, ಧರ್ಮಸ್ಥಳದಲ್ಲಿ ಸದ್ಯಕ್ಕೆ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ದೇವಸ್ಥಾನ ತೆರೆಯಲಿದ್ದು, ಭಕ್ತಾಧಿಗಳಿಗೆ ದರ್ಶನಕ್ಕೆ ಅವಕಾಶ ಇರುತ್ತದೆ. ವಾರಾಂತ್ಯ ದಿನಗಳಂದು ಶನಿವಾರ ಮತ್ತು ಭಾನುವಾರ ದೇವಸ್ಥಾನ ಮುಚ್ಚಿರುತ್ತದೆ. ಸಾರ್ವಜನಿಕರ ಪ್ರತಿಕ್ರಿಯೆ ಗಮನಿಸಿ ಮತ್ತಷ್ಟು ಧಾರ್ಮಿಕ ಸ್ಥಳಗಳಿಗೆ ಬಸ್ ಸಂಚಾರ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ‌.

ಓದಿ:ತುಮಕೂರು ಜಿಲ್ಲೆಯ ಗಡಿಭಾಗದ ಜನರಿಗೆ ದರೋಡೆಕೋರರ ಭಯ..

ABOUT THE AUTHOR

...view details