ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ ಸ್ಫೋಟ ಪ್ರಕರಣ: ಮೂರು ದಿನಗಳಲ್ಲಿ ಮುಗಿಯಲಿದೆಯಂತೆ ತನಿಖೆ - ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ

ರೈಲ್ವೆ ನಿಲ್ದಾಣದಲ್ಲಿ ಅನುಮನಾಸ್ಪದ ಸ್ಪೋಟ ಪ್ರಕರಣದ ಹಿನ್ನೆಲೆಯಲ್ಲಿ ಇಂದು ನಗರದ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ರೈಲ್ವೆ ಇಲಾಖೆ ಸಹಾಯಕ ಸಚಿವ ಸುರೇಶ ಅಂಗಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ರು.

ರೈಲ್ವೇ  ನಿಲ್ದಾಣದಲ್ಲಿ ಸ್ಪೋಟ ಪ್ರಕರಣ: ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ಸುರೇಶ ಅಂಗಡಿ

By

Published : Oct 26, 2019, 4:03 PM IST

ಹುಬ್ಬಳ್ಳಿ: ರೈಲ್ವೆ ನಿಲ್ದಾಣದಲ್ಲಿ ಅನುಮನಾಸ್ಪದ ಸ್ಪೋಟ ಪ್ರಕರಣದ ಹಿನ್ನೆಲೆಯಲ್ಲಿ ಇಂದು ನಗರದ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ರೈಲ್ವೆ ಇಲಾಖೆ ಸಹಾಯಕ ಸಚಿವ ಸುರೇಶ ಅಂಗಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ರು.

ರೈಲ್ವೇ ನಿಲ್ದಾಣದಲ್ಲಿ ಸ್ಪೋಟ ಪ್ರಕರಣ: ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ಸುರೇಶ ಅಂಗಡಿ

ನಂತರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪ್ರಕರಣ ಕುರಿತು ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಸೋಮವಾರ ನಡೆದ ಘಟನೆ ಕುರಿತಂತೆ ಪರಿಶೀಲನೆ ನಡೆಸಲಾಗಿದ್ದು, ಸೂಕ್ತ ತನಿಖೆ ಕೈಗೊಳ್ಳಲಾಗಿದೆ ಎಂದರು. ಘಟನೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳಾದ ಸ್ಟೇಷನ್ ಮಾಸ್ಟರ್ ಎಸ್. ಎಂ.ವರೂಣಕುಮಾರ, ಹಾಗೂ ಆರ್​ಪಿಎಫ್ ಎಎಸ್ ಐ ಮಂಜುನಾಥ್ ಎಂಬುವವರನ್ನು ಅಮಾನತು ಮಾಡಲಾಗಿದೆ ಎಂದರು.

ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ. 3 ದಿನಗಳಲ್ಲಿ ಈ ತನಿಖೆ ಮುಗಿಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 3 ದಿನಗಳಲ್ಲಿ ಈ ಘಟನೆ ಕುರಿತು ವರದಿ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ವಿಮಾನ ನಿಲ್ದಾಣದಲ್ಲಿರುವ ಮಾದರಿಯಂತೆ ರೈಲ್ವೆ ನಿಲ್ದಾಣದಲ್ಲಿಯೂ ಸ್ಕ್ಯಾನಿಂಗ್ ಮಷಿನ್​ಗಳನ್ನ ಅಳವಡಿಸಲಾಗುವುದು. ರೈಲ್ವೆ ನಿಲ್ದಾಣದಲ್ಲಿ ಅನಧೀಕೃತ ವ್ಯಕ್ತಿಗಳು ಕಂಡುಬಂದಲ್ಲಿ ಅಂತವರ ವಿರುದ್ದ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.

For All Latest Updates

ABOUT THE AUTHOR

...view details