ಕರ್ನಾಟಕ

karnataka

By

Published : Dec 25, 2021, 4:54 PM IST

ETV Bharat / state

ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ವಿಶೇಷ ಕಾರ್ಯಕ್ರಮ : ಸಿಎಂ ಬೊಮ್ಮಾಯಿ ಭರವಸೆ

ಒಬ್ಬ ವ್ಯಕ್ತಿ 100 ವರ್ಷ ಉಳಿಯಬಹುದು. ಆದರೆ, ಒಂದು ಸಂಸ್ಥೆಯನ್ನು 100 ವರ್ಷ ಉಳಿಸಿಕೊಂಡು ಬರುವುದು ಬಹಳ ಕಷ್ಟ. ಇಂದಿನ ಖಾಸಗೀಕರಣ, ಜಾಗತೀಕರಣ ಹಾಗೂ ಆಧುನೀಕರಣ ನಡುವೆಯೂ ಸಹಕಾರಿ ಸಂಸ್ಥೆ ಉಳಿಸಿಕೊಂಡು ಬಂದಿರುವುದು ಪರಿಶ್ರಮದ ಪರಿಣಾಮ..

ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಶತಮಾನೋತ್ಸವ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಿ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು.

ಇಂದು ಹುಬ್ಬಳ್ಳಿಯ ಅಮರಗೋಳದಲ್ಲಿರುವ ಜಗಜ್ಯೋತಿ ಬಸವೇಶ್ವರ ಎಪಿಎಂಸಿಯಲ್ಲಿ ಆಯೋಜಿಸಲಾಗಿದ್ದ ಹುಬ್ಬಳ್ಳಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಗತವೈಭವ ಮರುಕಳಿಸಬೇಕು ಎಂಬ ಆಶಯ ವ್ಯಕ್ತಪಡಿಸಿದರು. ಶತಮಾನದಿಂದ ಈ ಸಂಸ್ಥೆಯನ್ನು ಉಳಿಸಿಕೊಂಡು ಬಂದಿದ್ದು, ರೈತರ ವಿಶ್ವಾಸವನ್ನು ಉಳಿಸಿಕೊಂಡು ಹೋಗುವ ಕಾರ್ಯಗಳನ್ನು ಮುಂದಿನ ದಿನಗಳಲ್ಲೂ ಹೆಚ್ಚಿನ ರೀತಿಯಲ್ಲಿ ಮಾಡುವಂತೆ ತಿಳಿಸಿದರು.

ಈ ಪ್ರತಿಷ್ಠಿತ ಸಂಸ್ಥೆ ರೈತರ ಆಸ್ತಿ. ಆ ಪ್ರತಿಷ್ಠೆಯನ್ನು ಮತ್ತು ರೈತ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಲು ವಿಶೇಷ ಕಾಳಜಿ ಮತ್ತು ಮುತುವರ್ಜಿ ವಹಿಸಬೇಕು. ಇದರೊಂದಿಗೆ ನಾನು ಸಹ ಈ ಸಂಸ್ಥೆಯ ಜೊತೆ ಇರುವುದಾಗಿ ಮುಖ್ಯಮಂತ್ರಿಯವರು ತಿಳಿಸಿದರು.

ಒಬ್ಬ ವ್ಯಕ್ತಿ 100 ವರ್ಷ ಉಳಿಯಬಹುದು. ಆದರೆ, ಒಂದು ಸಂಸ್ಥೆಯನ್ನು 100 ವರ್ಷ ಉಳಿಸಿಕೊಂಡು ಬರುವುದು ಬಹಳ ಕಷ್ಟ. ಇಂದಿನ ಖಾಸಗೀಕರಣ, ಜಾಗತೀಕರಣ ಹಾಗೂ ಆಧುನೀಕರಣ ನಡುವೆಯೂ ಸಹಕಾರಿ ಸಂಸ್ಥೆ ಉಳಿಸಿಕೊಂಡು ಬಂದಿರುವುದು ಪರಿಶ್ರಮದ ಪರಿಣಾಮ ಎಂದರು.

ರೈತರ ವಿಷಯ ಬಂದಾಗ, ರೈತರ ಸಮಸ್ಯೆ ವಿಷಯ ಬಂದಾಗ ಬೇರೆಲ್ಲವನ್ನು ಮರೆತು ನಾವು ಒಗ್ಗಟಾಗಿ ಕೆಲಸ ಮಾಡೋಣ ಎಂದರು. ಸಂಸ್ಥೆಯು ಬೆಳೆದರೆ ರೈತರಿಗೆ ಅನುಕೂಲವಾಗುವುದು. ಸಂಸ್ಥೆಯಿಂದ ನಾವು-ನಿವೆಲ್ಲರೂ ಬೆಳೆದಿದ್ದೇವೆ, ರಾಜಕೀಯವಾಗಿಯೂ ಬೆಳೆದಿದ್ದೇವೆ. ಈ ಸಂಸ್ಥೆಯನ್ನು ಬೆಳೆಸಲು ನಾವು-ನೀವು ಮರಳಿ ಏನನ್ನಾದರೂ ನೀಡುವ ಚಿಂತನೆಯನ್ನು ಮಾಡಬೇಕಿದೆ ಎಂದರು.

ಇದು ನನ್ನ ಸಂಸ್ಥೆ. ಈ ಸಂಸ್ಥೆಗೆ ಸರ್ಕಾರದಿಂದ ನೀಡಬೇಕಾಗಿರುವ ಸಹಾಯ-ಸಹಕಾರವನ್ನು ಸರ್ಕಾರದಿಂದ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಸಂಸ್ಥೆಯವರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

For All Latest Updates

TAGGED:

ABOUT THE AUTHOR

...view details