ಕರ್ನಾಟಕ

karnataka

ETV Bharat / state

ಲೋಕಸಭೆ ಚುನಾವಣೆ: ಶೆಟ್ಟರ್‌ಗೆ ಕಾಂಗ್ರೆಸ್ ಟಿಕೆಟ್? ಸಿಎಂ ಪ್ರತಿಕ್ರಿಯೆ ಹೀಗಿದೆ - ಅಲ್ಪಸಂಖ್ಯಾತ ಸಮುದಾಯ

ಜಗದೀಶ್​ ಶೆಟ್ಟರ್​ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್‌ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಹಾಗು ಜಗದೀಶ್ ಶೆಟ್ಟರ್ ಅವರ ಪ್ರತಿಕ್ರಿಯೆ ಇಲ್ಲಿದೆ.

cm-siddaramaiah-reaction-on-mlc-jagdish-shettar
ಜಗದೀಶ್‌ ಶೆಟ್ಟರ್​ಗೆ ಸಿಎಂ ಸಿದ್ದರಾಮಯ್ಯರಿಂದ ಎಂಪಿ ಟಿಕೆಟ್ ಆಫರ್​: ಶೆಟ್ಟರ್​ ಹೇಳಿದ್ದೇನು?

By ETV Bharat Karnataka Team

Published : Dec 17, 2023, 4:09 PM IST

Updated : Dec 17, 2023, 4:24 PM IST

ಲೋಕಸಭೆ ಚುನಾವಣೆ ಕುರಿತು ಪ್ರತಿಕ್ರಿಯೆ

ಹುಬ್ಬಳ್ಳಿ:"ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಜಗದೀಶ್ ಶೆಟ್ಟರ್ ಅವರ ಅಭಿಪ್ರಾಯ ಕೇಳ್ತಿದ್ದೀವಿ. ಅವರೂ ಆಕಾಂಕ್ಷಿ ಅಂತ ಅಂದುಕೊಂಡಿದ್ದೀವಿ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶೆಟ್ಟರ್ ನಿವಾಸದಲ್ಲಿಂದು ಮಾತನಾಡಿದ ಅವರು, "ನಮ್ಮ ಶಾಸಕರು, ಕಾರ್ಯಕರ್ತರು ಹಾಗೂ ಈ ಹಿಂದೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಯಾರಿಗೆ ಟಿಕೆಟ್​ ಕೊಡಬೇಕು ಎಂದು ಹೇಳ್ತಾರೋ ಅವರಿಗೆ ಟಿಕೆಟ್ ಕೊಡುತ್ತೇವೆ" ಎಂದರು.

ಮುಂದುವರಿದು ಮಾತನಾಡಿದ ಸಿಎಂ, "ಪ್ರತಿ ಜಿಲ್ಲೆಯಲ್ಲೂ ಕೂಡ ಒಬ್ಬೊಬ್ಬ ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿದ್ದೇವೆ. ಅವರು ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅಭಿಪ್ರಾಯ ಸಂಗ್ರಹಿಸಿ ಮೂವರ ಹೆಸರುಗಳನ್ನು ಪ್ಯಾನೆಲ್​ಗೆ ಕೊಡಿ ಅಂತ ಹೇಳಿದ್ದೇವೆ. ಅವರಲ್ಲಿ ಯಾರು ಸೂಕ್ತ ಆಗ್ತಾರೋ, ಅಂಥವರಿಗೆ ಟಿಕೆಟ್​ ಕೊಡುತ್ತೇವೆ" ಎಂದು ಹೇಳಿದರು.

ಅಲ್ಪಸಂಖ್ಯಾತರು ಭಾರತೀಯ ನಾಗರಿಕರಲ್ಲವೇ?: ಅಲ್ಪಸಂಖ್ಯಾತ ಸಮುದಾಯಕ್ಕೆ ಮೂರು ಟಿಕೆಟ್ ಬೇಡಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, "ನಾವು ಈ ಹಿಂದೆ ಕೂಡ ಎರಡು ಟಿಕೆಟ್​ ಕೊಟ್ಟಿದ್ದೆವು. ಈ ಬಾರಿಯೂ ಕೊಡ್ತೇವೆ. ಬಿಜೆಪಿಯವರು ಏನ್ ಮಾಡ್ತಾರೆ? ಅವರು ಅಲ್ಪಸಂಖ್ಯಾತರ ವೋಟ್ ಬೇಡ ಅಂತಾರೆ. ಅಲ್ಪಸಂಖ್ಯಾತರು ಭಾರತೀಯ ನಾಗರಿಕರಲ್ಲವೇ? ಇದಕ್ಕೆ ಅವರು ಉತ್ತರ ಹೇಳುತ್ತಾರಾ?. ಯತ್ನಾಳ್ ಗಡ್ಡ ಬಿಟ್ಟವರು, ಬುರ್ಖಾ ಹಾಕಿದವರು ಬರಬೇಡಿ ಅಂತಾರೆ, ಅವರನ್ನು ನಾನು ಭೇಟಿ ಮಾಡಲ್ಲ ಅಂತಾರೆ. ಅವರದು ಬಹುತ್ವದ ಪಕ್ಷನಾ? ನಮ್ಮ ದೇಶ ಬಹುತ್ವದ ಸಂಸ್ಕೃತಿ ಇರುವ ದೇಶ" ಎಂದರು.

ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಅಲ್ಲ: ಜಗದೀಶ್ ಶೆಟ್ಟರ್ ಮಾತನಾಡಿ, "ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಅಲ್ಲ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಯಾರೂ ಕೂಡ ಇದರ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿಲ್ಲ. ಲೋಕಸಭೆ ಚುನಾವಣೆ ಕುರಿತ ಚರ್ಚೆ ಜನವರಿಯಲ್ಲಿ ನಡೆಯುತ್ತದೆ. ನಾನು ಕಾಂಗ್ರೆಸ್​ ಬಲಪಡಿಸುವ ಬಗ್ಗೆ ಆಗ ಅಭಿಪ್ರಾಯ ತಿಳಿಸುತ್ತೇನೆ" ಎಂದರು.

ಮರಳಿ ಬಿಜೆಪಿ ಸೇರ್ಪಡೆಯಾಗುವ ವಿಚಾರವಾಗಿ ಮಾತನಾಡಿದ ಶೆಟ್ಟರ್, "ಈ ರೀತಿ ಸುಳ್ಳು ಸುದ್ದಿಗಳನ್ನು ಹರಡಿ, ಬಿಜೆಪಿಯಿಂದ ಕಾಂಗ್ರೆಸ್​ಗೆ ಸೇರಲು ಬಯಸಿರುವ ವ್ಯಕ್ತಿಗಳನ್ನು ತಡೆಹಿಡಿಯುವ ಪ್ರಯತ್ನ ನಡೆಯುತ್ತದೆ" ಎಂದು ಹೇಳಿದರು.

ವಿಧಾನ ಪರಿಷತ್​ ಸದಸ್ಯ ಪ್ರದೀಪ್ ಶೆಟ್ಟರ್ ಮಾತನಾಡಿ, "ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ.‌ ನಮ್ಮ‌ ಜಾತಿಯವರಿಗೆ ಟಿಕೆಟ್ ಕೊಡಬೇಕು. ನಾನು ಲೋಕಸಭೆ ಟಿಕಟ್​ ಆಕಾಂಕ್ಷಿ. ಬಿಜೆಪಿಯಿಂದ ಟಿಕೆಟ್ ಕೊಟ್ಟರೆ ಸ್ಪರ್ಧೆಗೆ ಸಿದ್ಧ" ಎಂದು ತಿಳಿಸಿದರು.

ಇದನ್ನೂ ಓದಿ:ಜಾತಿ ಗಣತಿ ವಿವಾದ ಬಗ್ಗೆ ಸಿಎಂ ಭೇಟಿ : ವೀರಶೈವ - ಲಿಂಗಾಯತ ಶಾಸಕರಿಂದ ಹೊಸ ಸಮೀಕ್ಷೆಗೆ ಪಟ್ಟು

Last Updated : Dec 17, 2023, 4:24 PM IST

ABOUT THE AUTHOR

...view details