ಕರ್ನಾಟಕ

karnataka

ETV Bharat / state

ನಾಡೋಜ ಡಾ. ಚೆನ್ನವೀರ ಕಣವಿ ಶೀಘ್ರ ಚೇತರಿಕೆಗೆ ಸಿಎಂ ಬೊಮ್ಮಾಯಿ ಪ್ರಾರ್ಥನೆ - Nadoja Dr. Chennaweera getting Treatment at Hospital

ಸಿಎಂ ಬಸವರಾಜ ಬೊಮ್ಮಾಯಿ ಅವರು ಡಾ. ಚೆನ್ನವೀರ ಕಣವಿ ಅವರ ಕುಟುಂಬ ಸದಸ್ಯರೊಂದಿಗೆ ಭಾನುವಾರ ಮಾತನಾಡಿದ್ದಾರೆ. ಅವರ ಆರೋಗ್ಯದ ಬಗ್ಗೆ ಸಿಎಂ ಮಾಹಿತಿ ಪಡೆದುಕೊಂಡಿದ್ದಾರೆ..

CM wishes for a speedy recovery of Chennaveera kanavi
ಕಣವಿ ಶೀಘ್ರ ಚೇತರಿಕೆಗೆ ಸಿಎಂ ಹಾರೈಕೆ

By

Published : Jan 16, 2022, 3:58 PM IST

ಧಾರವಾಡ :ಉಸಿರಾಟದ ತೊಂದರೆಯಿಂದ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಾರ್ಥಿಸಿದ್ದಾರೆ.

ಕಣವಿ ಅವರ ಕುಟುಂಬ ಸದಸ್ಯರೊಂದಿಗೆ ಭಾನುವಾರ ಮಾತನಾಡಿರುವ ಸಿಎಂ, ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿಗೆ ಕೊರೊನಾ.. ಆರೋಗ್ಯ ಸ್ಥಿತಿ ಸ್ಥಿರ

ಅನಾರೋಗ್ಯವೆಂದು ಆಸ್ಪತ್ರೆಗೆ ತೆರಳಿದಾಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಕಣವಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

For All Latest Updates

TAGGED:

ABOUT THE AUTHOR

...view details