ಕರ್ನಾಟಕ

karnataka

ETV Bharat / state

ಮಚ್ಚಿನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಯುವಕನೊಬ್ಬನಿಗೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಈ ಘಟನೆ ಕುಸುಗಲ್ ರಸ್ತೆಯ ಶೆಲ್ ಪೆಟ್ರೋಲ್ ಬಂಕ್ ಹತ್ತಿರ ಜರುಗಿದೆ..

By

Published : Nov 27, 2021, 10:37 PM IST

ಮಚ್ಚಿನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
ಮಚ್ಚಿನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

ಹುಬ್ಬಳ್ಳಿ: ಕಳವು ಆರೋಪವನ್ನು ಪೊಲೀಸರಿಗೆ ತಿಳಿಸಿದ ಕಾರಣಕ್ಕೆ ಯುವಕನೊಬ್ಬನಿಗೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕುಸುಗಲ್ ರಸ್ತೆಯ ಶೆಲ್ ಪೆಟ್ರೋಲ್ ಬಂಕ್ ಹತ್ತಿರ ಜರುಗಿದೆ.

ವಿನೋಬಾನಗರದ ರಾಹುಲ್ ಅಲಿಯಾಸ್ ಬಬ್ಲೂ ಬಂಡಿ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಿಮೆಂಟ್ ಚಾಳದ ಪ್ರಭುರಾಜ ಕಲ್ಲೂಸಾ, ಜನತಾ ಕ್ವಾರ್ಟರ್ಸ್‌ನ ಪ್ರಶಾಂತ ಬೊಮ್ಮಾಜಿ ಎಂಬುವರು ಹಲ್ಲೆ ಮಾಡಿದ್ದಾರೆ.

ರಾಹುಲ್ ಅಲಿಯಾಸ್ ಬಂಡಿ ಈ ಹಿಂದೆ ಕಳ್ಳತನ ಮಾಡಿರುವ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದೇ ಘಟನೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಆರೋಪಿತರು ಎಳೆನೀರು ಕೊಚ್ಚುವ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ.

ಗಾಯಗೊಂಡಿರುವ ರಾಹುಲ್‌ನನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕೇಶ್ವಾಪುರ ಪೋಲಿಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details