ಹುಬ್ಬಳ್ಳಿ:ಧಾರವಾಡ ಜಿಲ್ಲಾಸ್ಪತ್ರೆಯ ಸಿಬ್ಬಂದಿಯ ಯಡವಟ್ಟಿನಿಂದಾಗಿ ಇಟ್ಟಿಗಟ್ಟಿ ಅಪಘಾತದಲ್ಲಿ ಮೃತಪಟ್ಟವರ ಶವಗಳು ಅದಲು ಬದಲಾಗಿರುವ ಘಟನೆ ನಡೆದಿದೆ.
ಇಂದು ಬೆಳಗ್ಗೆ ಧಾರವಾಡದ ಇಟ್ಟಿಗಟ್ಟಿ ಬಳಿ ನಡೆದ ಅಪಘಾತದಲ್ಲಿ 11 ಜನ ಮೃತಪಟ್ಟಿದ್ದು, ಮೃತರಲ್ಲಿ ಅಸ್ಮಿತಾ ಹಾಗೂ ಪರಂಜ್ಯೋತಿ ಎಂಬ ಯುವತಿಯರಿದ್ದರು. ಈ ಇಬ್ಬರ ಶವಗಳನ್ನು ಗುರುತಿಸುವಲ್ಲಿ ಗೊಂದಲ ಸೃಷ್ಟಿಯಾಗಿ ಪರಂಜ್ಯೋತಿ ಎಂದು ಅಸ್ಮಿತಾ ಶವವನ್ನು ಪರಂಜ್ಯೋತಿ ಕುಟುಂಬಸ್ಥರು ತೆಗೆದುಕೊಂಡು ಹೋಗಿದ್ದಾರೆ.