ಕರ್ನಾಟಕ

karnataka

By

Published : Jul 28, 2022, 3:12 PM IST

ETV Bharat / state

ಪ್ರವೀಣ್​ ಹತ್ಯೆಗೆ ಖಂಡನೆ: ಧಾರವಾಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ರೇಖಾ ರಾಜೀನಾಮೆ!

ಮೊದಲು ಹಿಂದುತ್ವ ನಂತರ ಪಕ್ಷ ಎಂಬುದರ ಮೇಲೆ ನಂಬಿಕೆ ಇಟ್ಟುಕೊಂಡಿದ್ದು, ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ರೇಖಾ ಹೊಸೂರು ತಿಳಿಸಿದ್ದಾರೆ.

Dharwad district executive member Rekha resigned
ಧಾರವಾಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ರೇಖಾ ರಾಜೀನಾಮೆ

ಹುಬ್ಬಳ್ಳಿ(ಧಾರವಾಡ):ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಖಂಡಿಸಿ ತಮ್ಮ ಸ್ಥಾನಗಳಿಗೆ ಬಿಜೆಪಿ ನಾಯಕರು, ಕಾರ್ಯಕರ್ತರು ರಾಜೀನಾಮೆ ನೀಡುತ್ತಿದ್ದಾರೆ. ಇದೀಗ ಧಾರವಾಡ ಜಿಲ್ಲಾ ಕಾರ್ಯಕಾರಿಣಿ ಸ್ಥಾನಕ್ಕೆ ರೇಖಾ ಹೊಸೂರು ರಾಜೀನಾಮೆ ನೀಡಿದ್ದಾರೆ.

ಧಾರವಾಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ರೇಖಾ ರಾಜೀನಾಮೆ

ಮೊದಲು ಹಿಂದುತ್ವ ನಂತರ ಪಕ್ಷ ಎಂಬುದರ ಮೇಲೆ ನಂಬಿಕೆ ಇಟ್ಟುಕೊಂಡಿದ್ದು, ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ರೇಖಾ ಹೊಸೂರು ತಿಳಿಸಿದ್ದಾರೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿಯೇ ಉಳಿದಿದೆ. ರಾಜ್ಯದಲ್ಲಿ ನಡೆಯುತ್ತಿರುವ ಕೊಲೆಗಳಿಂದ ಬೇಸತ್ತು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಯುವ ಮೋರ್ಚಾ ಪದಾಧಿಕಾರಿಗಳ ರಾಜೀನಾಮೆ ಅಂಗೀಕಾರವಿಲ್ಲ, ಮನವೊಲಿಕೆಗೆ ಯತ್ನ: ಡಾ.ಸಂದೀಪ್‌

ABOUT THE AUTHOR

...view details