ಕರ್ನಾಟಕ

karnataka

ETV Bharat / state

ಧಾರವಾಡ: ವಿದ್ಯುತ್​ ನೀಡದ ಕೆಇಬಿ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ - KEB Department of Kalaghatagi Taluk

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ, ನಾಗನೂರ, ದ್ಯಾಮಪುರ ಗ್ರಾಮಗಳಿಗೆ ತಿಂಗಳಿಂದ ಸರಿಯಾಗಿ ವಿದ್ಯುತ್​ ಪೂರೈಕೆಯಾಗುತ್ತಿಲ್ಲ ಎಂದು ದೂರಿ ಪಟ್ಟಣದಲ್ಲಿರುವ ಕೆಇಬಿಗೆ ರೈತರು ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

Dharwad: Farmers protest against KEB officials for not providing electricity
ಧಾರವಾಡ: ವಿದ್ಯುತ್​ ನೀಡದ ಕೆಇಬಿ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ

By

Published : Dec 26, 2020, 4:54 PM IST

ಕಲಘಟಗಿ(ಧಾರವಾಡ):ತಾಲೂಕಿನ ಸೂರಶೆಟ್ಟಿಕೊಪ್ಪ, ನಾಗನೂರ, ದ್ಯಾಮಪುರ ಗ್ರಾಮಗಳಿಗೆ ತಿಂಗಳಿಂದ ಸರಿಯಾಗಿ ವಿದ್ಯುತ್​ ಪೂರೈಕೆಯಾಗುತ್ತಿಲ್ಲ ಎಂದು ದೂರಿ ಪಟ್ಟಣದಲ್ಲಿರುವ ಕೆಇಬಿಗೆ ರೈತರು ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಧಾರವಾಡ: ವಿದ್ಯುತ್​ ನೀಡದ ಕೆಇಬಿ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ

ಹಲವಾರು ಬಾರಿ ವಿದ್ಯುತ್ ನೀಡಿ ಎಂದು ಮೌಖಿಕವಾಗಿ ಹಾಗೂ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಎಲ್ಲಾ ರೈತರ ಜಮೀನಿನಲ್ಲಿ ಗೋವಿನಜೋಳ, ಶೇಂಗಾ, ಕಬ್ಬು ಬೆಳೆ ಬೆಳೆದಿದ್ದು, ಬಿಸಿಲಿಗೆ ನೀರಿಲ್ಲದೆ ಒಣಗುತ್ತಿವೆ. ಕೂಡಲೇ ವಿದ್ಯುತ್​ ಪುರೈಕೆ ಮಾಡಬೇಕು ಎಂದು ರೈತರು ಒತ್ತಾಯಿಸಿದರು.

4 ಗಂಟೆಗಳ ಕಾಲ ಕೆಇಬಿ ಇಲಾಖೆ ಮುಂದೆ ರೈತರು ತಾತ್ಕಾಲಿಕ ಧರಣಿ ನಡೆಸಿ ಪ್ರತಿಭಟನೆ ಮಾಡಿದರು. ಆದರೂ ಸ್ಥಳಕ್ಕೆ ಯಾವ ಅಧಿಕಾರಿಗಳು ಬಾರದ ಹಿನ್ನೆಲೆ ರೈತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details