ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುತಾತ್ಮ ಯೋಧರಾದ ಹಸನ್ ಸಾಬ್ ಖುದಾಬಂದ್ ಹಾಗೂ ಬಸಪ್ಪ ಭಜಂತ್ರಿ ಅವರ ಕುಟುಂಬಗಳಿಗೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಲಕ್ಕಮ್ಮನಹಳ್ಳಿಯಲ್ಲಿ ಉಚಿತವಾಗಿ ನಿವೇಶನ ನೀಡಲಾಯಿತು.
ಹುತಾತ್ಮ ಯೋಧರ ಕುಟುಂಬಗಳಿಗೆ ಉಚಿತ ನಿವೇಶನ - Hubli and dharwad martyrs soldiers
ಧಾರವಾಡ ಜಿಲ್ಲೆಯ ಹುತಾತ್ಮ ಯೋಧರಾದ ಹಸನ್ ಸಾಬ್ ಖುದಾಬಂದ್ ಹಾಗೂ ಬಸಪ್ಪ ಭಜಂತ್ರಿ ಅವರ ಕುಟುಂಬಕ್ಕೆ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಧಾರವಾಡ ಲಕ್ಕಮ್ಮನಹಳ್ಳಿಯಲ್ಲಿ ಉಚಿತವಾಗಿ ನಿವೇಶನ ನೀಡಲಾಯಿತು.

ಸೈನಿಕ ಹಸನ್ ಸಾಬ್ ಖುದಾಬಂದ್ ತಾಯಿ ಜನತ್ ಬಿ ಖುದಾಬಂದ್, ಸಿ.ಆರ್.ಪಿ.ಎಫ್ ಯೋಧ ಬಸಪ್ಪ ಭಜಂತ್ರಿ ಅವರ ಪತ್ನಿ ರೇಣುಕಾ ಭಜಂತ್ರಿ ನಿವೇಶನ ಪತ್ರಗಳನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್, ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಶಾಸಕರಾದ ಅರವಿಂದ ಬೆಲ್ಲದ್, ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಪ್ರದೀಪ್ ಶೆಟ್ಟರ್, ಸಿ.ಎಂ. ನಿಂಬಣ್ಣನವರ, ಹುಡಾ ಆಯುಕ್ತ ನಿಂಗಪ್ಪ ಕುಮ್ಮಣ್ಣನವರ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಹುಡಾ ಸದಸ್ಯರು ಉಪಸ್ಥಿತರಿದ್ದರು.